ಮಹಾರಾಷ್ಟ್ರ ಚುನಾವಣೆ | ಆರ್‌ಎಸ್‌ಎಸ್‌ ವಿರೋಧ ಇದ್ದರೂ ಅಜಿತ್ ಜೊತೆ ಬಿಜೆಪಿ ಮೈತ್ರಿ

Date:

Advertisements

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್‌ಎಸ್‌ಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್‌ಸಿಪಿ ಜೊತೆ ಮೈತ್ರಿಗೆ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಎನ್‌ಸಿಪಿ (ಅಜಿತ್ ಬಣ)-ಶಿವಸೇನಾ (ಸಿಂಧೆ ಬಣ)ದ ಮಹಾಯುತಿ ಕಳಪೆ ಪ್ರದರ್ಶನ ನೀಡಿ, ಹೀನಾಯವಾಗಿ ಸೋಲುಂಡಿದೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಕೇವಲ 17 ಸ್ಥಾನಗಳನ್ನು ಮಾತ್ರವೇ ಮಹಾಯುತಿ ಗೆದ್ದುಕೊಂಡಿದೆ. ಅದರಲ್ಲೂ, ಅಜಿತ್ ಅವರ ಎನ್‌ಸಿಪಿ ಕೊಡುಗೆ ಕೇವಲ ಒಂದು ಸ್ಥಾನ ಮಾತ್ರ. ಹೀಗಾಗಿ, ಅಜಿತ್ ಅವರೊಂದಿಗಿನ ಮೈತ್ರಿಯನ್ನು ಕಡಿತಗೊಳಿಸಲು ಆರ್‌ಎಸ್‌ಎಸ್‌ ಬಯಸಿದೆ. ಆದರೂ, ಬಿಜೆಪಿಗರು ಅಜಿತ್ ಜೊತೆ ಮುಂದುವರೆಯಲು ನಿರ್ಧರಿಸಿದ್ದಾರೆ. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಗಮನಾರ್ಹವಾಗಿ ‘ಇಂಡಿಯಾ’ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ 31 ಸ್ಥಾನಗಳನ್ನು ಗೆದ್ದು, ಪ್ರಾಬಲ್ಯತೆಯನ್ನು ಹೆಚ್ಚಿಸಿಕೊಂಡಿದೆ.

ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಕಾರಣಕ್ಕೆ ಅಜಿತ್ ಅವರ ಎನ್‌ಸಿಪಿಯನ್ನು ದೂಷಿಸಿರುವ ಆರ್‌ಎಸ್‌ಎಸ್‌ ಮುಖವಾಣಿ ‘ಆರ್ಗನೈಸರ್’, “ವಿಭಿನ್ನ ಸಿದ್ಧಾಂತ ಮತ್ತು ಅಜಿತ್ ಅವರು ತಮ್ಮ ಇಮೇಜ್ ಕಳೆದುಕೊಂಡಿರುವ ಕಾರಣದಿಂದಾಗಿ ಬಿಜೆಪಿ ನೇತೃತ್ವದ ಮಹಾಯುತಿಯು ಕಳಪೆ ಪ್ರದರ್ಶನ ನೀಡಬೇಕಾಯಿತು” ಎಂದು ಹೇಳಿಕೊಂಡಿದೆ. ಅಲ್ಲದೆ, ಆರ್‌ಎಸ್‌ಎಸ್‌ನ ಮತ್ತೊಂದು ಮುಖವಾಣಿ, ಮರಾಠಿ ವಾರಪತ್ರಿಕೆ ‘ವಿವೇಕ್’ ಕೂಡ ಅದೇ ಅಭಿಪ್ರಾಯಗಳನ್ನು ಪ್ರತಿಧ್ವನಿಸಿದೆ. ಅಜಿತ್ ಜೊತೆಗಿನ ಮೈತ್ರಿಯನ್ನು ಮುರಿಯುವಂತೆ ಪರೋಕ್ಷವಾಗಿ ಬಿಜೆಪಿಗೆ ಸೂಚನೆ ನೀಡಿದೆ.

Advertisements

ಆದಾಗ್ಯೂ, ಅಜಿತ್ ಮತ್ತು ಅವರ ಸಂಗಡಿಗರು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್‌ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ. ಬಳಿಕ, ಬಿಜೆಪಿ ತಮ್ಮೊಂದಿಗಿನ ಮೈತ್ರಿಯನ್ನು ಕಡಿತಗೊಳಿಸುವುದಿಲ್ಲ. ಮುಂಬರು ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್‌ಸಿಪಿ (ಅಜಿತ್) ಒಟ್ಟಾಗಿ ಮುನ್ನಡೆಯುತ್ತದೆ ಎಂದು ಬಿಜೆಪಿ ನಾಯಕರು ಭರವಸೆ ನೀಡಿರುವುದಾಗಿ ಅಜಿತ್ ಬಣ ಹೇಳಿಕೊಂಡಿದೆ.

ಮೂಲಗಳ ಪ್ರಕಾರ, ಅಜಿತ್ ಜೊತೆಗಿನ ಮೈತ್ರಿ ಪ್ರಸ್ತುತ ಅಗತ್ಯವಾಗಿದೆ ಎಂದು ಬಿಜೆಪಿ ನಾಯಕತ್ವವು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮೂಲಕ ಆರ್‌ಎಸ್‌ಎಸ್‌ಗೆ ಸಂದೇಶ ರವಾನಿಸಿದೆ.

“ಮಹಾರಾಷ್ಟ್ರದಲ್ಲಿ ಬಿಜೆಪಿ ಸ್ವಂತ ಬಲದಿಂದ ಚುನಾವಣೆ ಎದುರಿಸುವ ಸ್ಥಿತಿಯಲ್ಲಿಲ್ಲ. ಎಂವಿಎಯನ್ನು (ಇಂಡಿಯಾ ಒಕ್ಕೂಟ) ಎದುರಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗೆ ಮೈತ್ರಿ ಅಗತ್ಯ” ಎಂದು ಅಜಿತ್ ಅವರ ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X