ಮಹಾರಾಷ್ಟ್ರ ಚುನಾವಣೆ | 2022ರಲ್ಲಿ ಶಿವಸೇನೆ ವಿಭಜನೆಗೆ ಬಿಜೆಪಿ ಹೈಕಮಾಂಡ್‌ ಒಪ್ಪಿತ್ತು; ಪೃಥ್ವಿರಾಜ್ ಚೌಹಾಣ್ ಆರೋಪ

Date:

Advertisements

ಮಹಾವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ 2022ರಲ್ಲಿನ ಶಿವಸೇನೆ ವಿಭಜನೆಗೆ ಬಿಜೆಪಿಯ ಉನ್ನತ ನಾಯಕತ್ವ ಒಪ್ಪಿಗೆ ನೀಡಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಆರೋಪಿಸಿದ್ದಾರೆ.

ಹಾರಾಷ್ಟ್ರದ ಸತಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿರಾಜ್ ಚೌಹಾಣ್, “2022ರಲ್ಲಿ ಮುಖ್ಯಮಂತ್ರಿಯಾಗಿದ್ದ ಹಾಗೂ ಶಿವಸೇನೆ ಅಧ್ಯಕ್ಷರಾಗಿದ್ದ ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಶಿವಸೇನೆಯ ಒಂದು ಗುಂಪು ಬಂಡಾಯ ಎದ್ದಿತ್ತು. ಅದಕ್ಕೆ ಬಿಜೆಪಿ ಕುಮ್ಮಕ್ಕು ನೀಡಿತ್ತು. ಶಿವಸೇನೆ ವಿಭಜನೆಗೊಂಡ ನಂತರ, ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂದೆ ಬಿಜೆಪಿ ಜೊತೆಗೂಡಿ ಮುಖ್ಯಮಂತ್ರಿಯಾಗಿದರು” ಎಂದು ಹೇಳಿದ್ದಾರೆ.

“ಶಿವಸೇನೆಯನ್ನು ವಿಭಜಿಸುವ ಮೂಲಕ, ಬಿಜೆಪಿಯ ಉನ್ನತ ನಾಯಕತ್ವವು ಮಹಾವಿಕಾಸ್ ಅಘಾಡಿ ಸರ್ಕಾರವನ್ನು ಪತನಗೊಳಿಸಿತ್ತು. ಈ ಸಂಪೂರ್ಣ ನಡೆಗೆ ಬಿಜೆಪಿ ಉನ್ನತ ನಾಯಕತ್ವದ ಅನುಮೋದನೆಯಿತ್ತು” ಎಂದು ಅವರು ಆರೋಪಿಸಿದ್ದಾರೆ.

Advertisements

“ಶಿವಸೇನೆಯನ್ನು ಒಡೆದು, ಮಹಾವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸುವ ಯೋಜನೆಯನ್ನು ಕೇವಲ ಇಬ್ಬರು ಮೂವರಿಂದ ಮುಂಬೈನಲ್ಲಿ ಮಾಡಲಾಗಿಲ್ಲ. ಇದರ ಹಿಂದೆ ಇಡೀ ಬಿಜೆಪಿ ಯಂತ್ರವೇ ಇದ್ದುದರಿಂದ, ಅತ್ಯಂತ ನಾಜೂಕಾಗಿ ಈ ಯೋಜನೆಯನ್ನು ಮಾಡಲಾಗಿತ್ತು. ಸೇನಾ ಕಾರ್ಯಾಚರಣೆಯಂತೆ ಶಾಸಕರಿಗೆ ಭದ್ರತೆ ಹಾಗೂ ಚಾರ್ಟರ್ಡ್ ವಿಮಾನಗಳನ್ನು ಒದಗಿಸಲಾಗಿತ್ತು” ಎಂದು ಅವರು ಆಪಾದಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ‘ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ’ ಎಂಬ ಭ್ರಷ್ಟಾಚಾರ ವಿರೋಧಿ ಘೋಷಣೆಯನ್ನು ಮಹಾರಾಷ್ಟ್ರದಲ್ಲಿ ಕೂಗಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X