ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

Date:

Advertisements

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದು, ಮಹಾರಾಷ್ಟ್ರ ಸರ್ಕಾರವು ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಮತದಾರರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಮತ್ತು 2024ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತಗಳಲ್ಲಿ ಬದಲಾವಣೆಯಾಗಿದೆ ಎಂದು ಕಾಂಗ್ರೆಸ್ ದೂರಿದೆ. ಈ ಹಿಂದೆಯೂ ಕಾಂಗ್ರೆಸ್ ಹಲವು ಬಾರಿ ಈ ಆರೋಪ ಮಾಡಿದೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ನ ದತ್ತಾಂಶ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಈ ಆರೋಪಗಳನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ

Advertisements

“ಮಹಾರಾಷ್ಟ್ರ ಸರ್ಕಾರವು ಸರಿಯಾದ ರೀತಿಯ, ಕಾನೂನುಬದ್ಧವಾದ ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿಲ್ಲ. ಭಾರತದ ಅತೀ ಹಳೆಯ, ಸ್ವಾತಂತ್ರ್ಯದಲ್ಲಿ ಹೋರಾಡಿದ ಏಕೈಕ ಪಕ್ಷವಾಗಿ ನಾವು ಅತೀ ಜವಾಬ್ದಾರಿಯಿಂದ ಈ ಹೇಳಿಕೆಯನ್ನು ನೀಡುತ್ತಿದ್ದೇವೆ” ಎಂದು ಪ್ರವೀಣ್ ಚಕ್ರವರ್ತಿ ತಿಳಿಸಿದ್ದಾರೆ.

“ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತ ಪ್ರಮಾಣದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬಂದಿವೆ. ಲೋಕಸಭೆ ಚುನಾವಣೆಯ ಬಳಿಕ ವಿಧಾನಸಭೆ ಚುನಾವಣೆ ವೇಳೆಗೆ ಒಟ್ಟಾಗಿ 48 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. 2019ರಲ್ಲಿ ಬರೀ 32 ಲಕ್ಷ ಮತದಾರರನ್ನು ಮಾತ್ರ ಪಟ್ಟಿಗೆ ಸೇರಿಸಲಾಗಿತ್ತು” ಎಂದು ವಿವರಿಸಿದ್ದಾರೆ.

“ಇನ್ನು ಆಶ್ಚರ್ಯವೆಂದರೆ ಈ ಎಲ್ಲಾ ಹೊಸ ಮತದಾರರು ಒಂದೇ ಮೈತ್ರಿಕೂಟಕ್ಕೆ ಮತ ಹಾಕಿರುವಂತಿದೆ, ಅದು ಮಹಾಯುತಿ. ಇದು ತರ್ಕಬದ್ಧವಾಗಿ ಕಾಣುತ್ತದೆಯೇ? ಇದು ಪವಾಡ ಸದೃಶವಾಗಿ ನಡೆದ ಕಾಕತಾಳೀಯತೆಯೇ? ಇದನ್ನು ಹೇಗೆ ವಿವರಿಸುವುದು? ಇದು ವಿಚಿತ್ರವಲ್ಲವೇ” ಎಂದು ಚಕ್ರವರ್ತಿ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಲೋಕಸಭೆ ಚುನಾವಣೆಗೆ ಹೋಲಿಸಿದರೆ ಮಹಾಯುತಿ ಸುಮಾರು 72 ಲಕ್ಷ ಅಧಿಕ ಮತವನ್ನು ವಿಧಾನಸಭೆ ಚುನಾವಣೆಯಲ್ಲಿ ಪಡೆದಿದೆ. ಮಹಾ ವಿಕಾಸ್ ಅಘಾಡಿಗೆ ಮತ ಹಾಕಿದ್ದ ಕೇವಲ 24 ಲಕ್ಷ ಜನರು ಮತ ಬದಲಾಯಿಸಿಕೊಂಡಿದ್ದಾರೆ. ಆದರೆ ಮಹಾಯುತಿ 72 ಲಕ್ಷ ಮತವನ್ನು ಪಡೆದಿದೆ ಎಂದು ಕಾಂಗ್ರೆಸ್ ನಾಯಕ ವಿವರಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 48 ಕ್ಷೇತ್ರಗಳ ಪೈಕಿ ಮಹಾ ವಿಕಾಸ್ ಅಘಾಡಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, 18 ಮಾತ್ರ ಮಹಾಯುತಿ ಪಾಲಾಗಿದೆ. ಆದರೆ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ 288 ಕ್ಷೇತ್ರಗಳ ಪೈಕಿ 230ರಲ್ಲಿ ಮಹಾಯುತಿ ಗೆದ್ದಿದೆ. ಈ ಪೈಕಿ ಬಿಜೆಪಿ 132, ಶಿವಸೇನೆ (ಶಿಂದೆ ಬಣ) 57 ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X