ಕನ್ನಡಿಗರ ತೆರಿಗೆ ಹಣ ಬೇಕಾಬಿಟ್ಟಿ ಖರ್ಚು ಮಾಡುವುದೇ ಮಜಾವಾದಿ ಸರ್ಕಾರದ ಅಜೆಂಡಾ: ಬಿಜೆಪಿ ಟೀಕೆ

Date:

Advertisements

“ಇಡೀ ಸಮಸ್ತ ಕರ್ನಾಟಕದ ಜನತೆಯ ಕಿವಿ ಮೇಲೆ ಹೂವಿಟ್ಟು ಅಧಿಕಾರಕ್ಕೆ ಬಂದ‌ ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ, ಇದೀಗ ಕನ್ನಡಿಗರ‌ ತೆರಿಗೆ ಹಣದಲ್ಲಿ ಮೋಜು, ಮಸ್ತಿ ಮಾಡುತ್ತಾ ರೆಸಾರ್ಟ್‌ವರೆಗೂ ತಲುಪಿದೆ” ಎಂದು ಬಿಜೆಪಿ ಟೀಕಿಸಿದೆ.

ರಾಜ್ಯಸಭಾ ಚುನಾವನೆ ಹಿನ್ನೆಲೆಯಲ್ಲಿ ಶಾಸಕರ ಸಮೇತ ರೆಸಾರ್ಟ್‌ನಲ್ಲಿ ತಂಗಿರುವ ಬಗ್ಗೆ ಎಕ್ಸ್‌ ತಾಣದಲ್ಲಿ ಟ್ವೀಟ್‌ ಮಾಡಿರುವ ಬಿಜೆಪಿ, “ಕರುನಾಡಿಗೆ ಬರ ಬಂದು ಬಡವರು ತಮ್ಮ ಕುಟುಂಬ ಸಮೇತ ಮಕ್ಕಳನ್ನು ಶಾಲೆ ಬಿಡಿಸಿ ಗುಳೆ ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ ಸರ್ಕಾರ ಮಾತ್ರ ಎಂಜಾಯ್ ಮಾಡಲು ರೆಸಾರ್ಟ್‌ಗೆ ಹೋಗಿದೆ” ಎಂದು ಕುಟುಕಿದೆ.

“ಎಟಿಎಂ ಸರ್ಕಾರ ಅಧಿಕಾರಕ್ಕೆ ಬಂದಿರುವುದು ರಾಜ್ಯದ ಅಭಿವೃದ್ಧಿ ಮಾಡುವುದಕ್ಕಾಗಲಿ, ಜನರನ್ನು ಉದ್ಧಾರ ಮಾಡುವುದಕ್ಕಾಗಲಿ ಅಲ್ಲ. ಕನ್ನಡಿಗರ ಹಣದಲ್ಲಿ ವಿದೇಶ ಪ್ರವಾಸ, ತೆಲಂಗಾಣ ಚುನಾವಣೆ ಪ್ರವಾಸ, ಹೈಕಮಾಂಡ್ ಭೇಟಿ ಆಗಲು ದೆಹಲಿ ಪ್ರವಾಸ, ರೆಸಾರ್ಟ್ ಪ್ರವಾಸಗಳನ್ನು ಕೈಗೊಂಡು ಕನ್ನಡಿಗರನ್ನು ದಿವಾಳಿ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದೆ.

Advertisements

“ಕನ್ನಡಿಗರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಶೋಕಿ ಮಾಡುವುದೊಂದೇ ಮಜಾವಾದಿ ಸರ್ಕಾರದ ಅಜೆಂಡಾ!” ಎಂದು ಹರಿಹಾಯ್ದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X