ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನಾರಚನೆ: ರಾಜ್ಯದ ಸಯ್ಯದ್ ನಾಸೀರ್‌ ಹುಸೇನ್‌ ಅವರಿಗೆ ಸ್ಥಾನ

Date:

Advertisements

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಜನ್ಮದಿನದ ಪ್ರಯುಕ್ತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಪುನಾರಚನೆ ಮಾಡಿದ್ದು, ರಾಜ್ಯದಿಂದ ರಾಜ್ಯಸಭಾ ಸದಸ್ಯರಾದ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಸ್ಥಾನ ಪಡೆದಿದ್ದಾರೆ.

ಹಾಗೆಯೇ ಕರ್ನಾಟಕದ ಮೂಲದವರಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರ ಸ್ಥಾನದಲ್ಲಿ ಬದಲಾವಣೆಯಾಗಿಲ್ಲ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಶಾಶ್ವತ ಆಹ್ವಾನಿತರಲ್ಲಿ ಸ್ಥಾನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಡಾಕ್‌ನಲ್ಲಿ 130 ಕಿಮೀ ಬೈಕ್‌ ಸವಾರಿ ಮಾಡಿದ ರಾಹುಲ್‌ ಗಾಂಧಿ; ಈ ವಾರ ಕಾರ್ಗಿಲ್‌ಗೆ ಭೇಟಿ

Advertisements

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯಲ್ಲಿ ರಾಜಸ್ಥಾನದ ನಾಯಕ ಸಚಿನ್ ಪೈಲಟ್ ಸ್ಥಾನ ಪಡೆದಿದ್ದಾರೆ. ಹೊಸದಾಗಿ ಸ್ಥಾನ ಪಡೆದವರಲ್ಲಿ ಶಶಿ ತರೂರ್‌, ದೀಪಾ ದಾಸ್ ಮುನ್ಷಿ ಮತ್ತು ಕರ್ನಾಟಕದ ಸೈಯದ್ ನಾಸರ್ ಹುಸೇನ್ ಕೂಡ ಸೇರಿದ್ದಾರೆ. ಸಚಿನ್‌ ಪೈಲಟ್ ಅವರನ್ನು ದೊಡ್ಡ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2020 ರಲ್ಲಿ ಪಕ್ಷದಲ್ಲಿ ಸುಧಾರಣೆಗೆ ಒತ್ತಾಯಿಸಿ ಜಿ-23 ಗುಂಪು ಬರೆದ ಪತ್ರಕ್ಕೆ ಸಹಿ ಹಾಕಿದ ಆನಂದ್ ಶರ್ಮಾ ಅವರು ಪಕ್ಷದ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾರ್ಯಕಾರಿ ಸಮಿತಿಯ ಒಟ್ಟು 39 ಸದಸ್ಯರಲ್ಲಿ ಸಚಿನ್ ಪೈಲಟ್, ಗೌರವ್ ಗೊಗೊಯ್ ಮತ್ತು ಕಮಲೇಶ್ವರ್ ಪಟೇಲ್ ಮಾತ್ರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸದಸ್ಯರಾಗಿದ್ದಾರೆ.

ಎಲ್ಲ ಸಿಡಬ್ಲ್ಯೂಸಿ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ಸಮಿತಿ ಫೆಬ್ರವರಿಯಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X