ಗಟ್ಟಿಗಿತ್ತಿ ಮಮತಾ ಬ್ಯಾನರ್ಜಿ ಭಾರತದ ಪ್ರಧಾನಿಯಾಗಬೇಕು: ಸುಬ್ರಮಣಿಯನ್ ಸ್ವಾಮಿ

Date:

Advertisements

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಬುಧವಾರ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೊಗಳಿದ್ದು, ಅವರು ಭಾರತದ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, “ಬೇರೆ ರಾಜಕಾರಣಿಗಳ ರೀತಿ ಮಮತಾ ಬ್ಯಾನರ್ಜಿ ಅವರನ್ನು ಬ್ಲ್ಯಾಕ್ ಮೇಲ್ ಮಾಡುವುದು ಸಾಧ್ಯವಿಲ್ಲ. ಗಟ್ಟಿಗಿತ್ತಿಯಾಗಿರುವ ಅವರು ಭಾರತದ ಪ್ರಧಾನಿಯಾಗಬೇಕು. ಅವರು 34 ವರ್ಷಗಳ ಕಾಲ ಕಮ್ಯುನಿಸ್ಟರ ವಿರುದ್ಧ ಹೇಗೆ ಹೋರಾಡಿದರು, ಈಗ ಏನು ಮಾಡುತ್ತಿದ್ದಾರೆಂದು ನೋಡಿ” ಎಂದು ಹೇಳಿದ್ದಾರೆ.

“ದೇಶಕ್ಕೆ ನಿಜವಾದ ವಿರೋಧ ಪಕ್ಷದ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಆ ಪಕ್ಷವನ್ನು ಅಧಿಕಾರದಲ್ಲಿರುವ ಜನರು ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ” ಎಂದು ಸ್ವಾಮಿ ಹೇಳಿದರು.

Advertisements

“ನಾನು ಬಹಳ ಜನರ ಬಗ್ಗೆ ತಿಳಿದಿದ್ದೇನೆ. ಅವರು ಪ್ರಸ್ತುತ ಸರ್ಕಾರದ ವಿರುದ್ಧ ಒಂದು ಹಂತವನ್ನು ಮೀರಿ ಹೋಗುವುದಿಲ್ಲ. ಏಕೆಂದರೆ ಅವರು ಇಡಿ, ಸಿಬಿಐ, ಆದಾಯ ತೆರಿಗೆ ಮುಂತಾದವುಗಳಿಗೆ ಹೆದರುತ್ತಾರೆ. ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ.

“ಭಾರತಕ್ಕೆ ಆಡಳಿತ ಪಕ್ಷಕ್ಕೆ ಹೆದರದೆ ಗಟ್ಟಿ ಧ್ವನಿಯಲ್ಲಿ ಹೇಳುವ ವಿರೋಧ ಪಕ್ಷದ ಅಗತ್ಯವಿದೆ. ಆದ ಕಾರಣ ಮಮತಾ ಬ್ಯಾನರ್ಜಿ ಅವರನ್ನು ಬೆದರಿಸಲು ಅಸಾಧ್ಯ” ಎಂದು ಸ್ವಾಮಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X