ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ; ಮಮತಾ ಬ್ಯಾನರ್ಜಿ

Date:

Advertisements

ʻಕಾಂಗ್ರೆಸ್ ಪಕ್ಷವು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ನಾವು ಆ ಪಕ್ಷವನ್ನು ಬೆಂಬಲಿಸಲಿದ್ದೇವೆʼ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ಕದನದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಸಂಭವನೀಯ ಕಾರ್ಯತಂತ್ರದ ಕುರಿತು ಇದೇ ಮೊದಲ ಬಾರಿ, ಟಿಎಂಸಿಯ ನಿಲುವನ್ನು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

 “ಕಾಂಗ್ರೆಸ್ ಎಲ್ಲೆಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ. ನಾವು ಅವರಿಗೆ ಬೆಂಬಲ ನೀಡುತ್ತೇವೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಇದಕ್ಕೆ ಪ್ರತಿಯಾಗಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಇತರ ಪಕ್ಷಗಳನ್ನು ಸಹ ಬೆಂಬಲಿಸಬೇಕು” ಎಂದು ಬ್ಯಾನರ್ಜಿ  ಹೇಳಿದ್ದಾರೆ.

Advertisements

ʻನಾನು ನಿಮಗೆ ಕರ್ನಾಟಕದಲ್ಲಿ ಬೆಂಬಲ ನೀಡುತ್ತಿದ್ದೇನೆ. ಆದರೆ ನೀವು ಪ್ರತಿದಿನ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದೀರಿ. ಇದು ಸರಿಯಲ್ಲ. ಇದನ್ನು ನಿಲ್ಲಿಸಬೇಕು. ನಿಮಗೆ ಅನುಕೂಲವಾಗಿ ಏನನ್ನಾದರೂ ಪಡೆಯಲು ಬಯಸಿದರೆ, ನೀವು ಕೆಲವು ಪ್ರದೇಶದಲ್ಲಿ ತ್ಯಾಗಕ್ಕೂ ಸಿದ್ದರಿರಬೇಕುʼ ಎಂದು ಮಮತಾ ಹೇಳಿದ್ಧಾರೆ.

ʻಕರ್ನಾಟಕದಲ್ಲಿ ಬಿಜೆಪಿ ಅಹಂಕಾರ, ತಾರತಮ್ಯ ವರ್ತನೆ, ಕೇಂದ್ರ ಏಜೆನ್ಸಿಗಳ ದುರ್ಬಳಕೆ ಮತ್ತು ಜನಸಾಮಾನ್ಯರ ವಿರುದ್ಧ ದೌರ್ಜನ್ಯಗಳು ಹೀನಾಯ ಸೋಲಿಗೆ ಕಾರಣವಾಗಿವೆ. ಬಿಜೆಪಿಯ ದಬ್ಬಾಳಿಕೆಯ ಆಡಳಿತದ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ನಾನು ವಂದಿಸುತ್ತೇನೆ. ಮುಂದಿನ ದಿನಗಳಲ್ಲಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಚುನಾವಣೆ ನಡೆಯಲಿವೆ. ಈ ರಾಜ್ಯಗಳಲ್ಲೂ ಬಿಜೆಪಿ ಸೋಲುವುದು ಖಚಿತʼ ಎಂದು ದೀದಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ  ಬಳಿಕ ಟಿಎಂಸಿ ಮುಖ್ಯಸ್ಥೆ ನೀಡಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X