ಮಾತನಾಡಲು ಅವಕಾಶ ನೀಡದ ಆರೋಪ; ನೀತಿ ಆಯೋಗ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರನಡೆದಿದ್ದಾರೆ. “ನನಗೆ ಮಾತನಾಡಲು ಅವಕಾಶ ನೀಡಿಲ್ಲ, ಮೈಕ್ ಆಫ್ ಮಾಡಿದರು” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ರಾಜಕೀಯ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿ ವಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಸಭೆಗೆ ಹಾಜರಾಗಿದ್ದರು.

ಸಭೆಯಲ್ಲಿ ಮಾತನಾಡಲು ಅವಕಾಶ ನೀಡದ ಕಾರಣ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ, “ಕೇಂದ್ರ ಬಜೆಟ್ ‘ರಾಜಕೀಯ ಪಕ್ಷಪಾತ’ದಿಂದ ಕೂಡಿದೆ” ಎಂದು ಆರೋಪಿಸಿದರು,

Advertisements

“ನಾನು ಸಭೆಯನ್ನು ಬಹಿಷ್ಕರಿಸಿ ಹೊರಗೆ ಬಂದಿದ್ದೇನೆ. ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ಅವಕಾಶ ನೀಡಲಾಗಿದೆ. ಅಸ್ಸಾಂ, ಗೋವಾ ಮತ್ತು ಛತ್ತೀಸ್‌ಗಢದ ಸಿಎಂಗಳು 10-12 ನಿಮಿಷಗಳ ಕಾಲ ಮಾತನಾಡಿದರು. ಆದರೆ ಕೇವಲ ಐದು ನಿಮಿಷ ಆಗುತ್ತಿದ್ದಂತೆ ನನ್ನ ಮಾತಿಗೆ ಅಡ್ಡಿಪಡಿಸಲಾಗಿದೆ, ತಡೆಯಲಾಗಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ಬಾಂಗ್ಲಾದೇಶ ಹಿಂಸಾಚಾರ | ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುತ್ತೇವೆ ಎಂದ ಮಮತಾ ಬ್ಯಾನರ್ಜಿ

“ಇದು ಅನ್ಯಾಯ. ನನ್ನನ್ನು ಯಾಕೆ ತಡೆದಿರಿ, ಏಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ನಾನು ಸಭೆಗೆ ಹಾಜರಾಗುತ್ತಿದ್ದೇನೆ, ಇದರಿಂದ ನೀವು (ಕೇಂದ್ರ ಸರ್ಕಾರ) ಸಂತೋಷವಾಗಿರಬೇಕು. ಬದಲಿಗೆ ನಿಮ್ಮ ಪಕ್ಷಕ್ಕೆ ನಿಮ್ಮ ಸರ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೀರಿ. ಇದು ಬಂಗಾಳಕ್ಕೆ ಮಾತ್ರವಲ್ಲ ಎಲ್ಲ ಪ್ರಾದೇಶಿಕ ಪಕ್ಷಗಳಿಗೂ ಮಾಡಿದ ಅವಮಾನ. ಇದು ಅನ್ಯಾಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿರೋಧ ಪಕ್ಷದಿಂದ, ನಾನು ಮಾತ್ರ ಪ್ರತಿನಿಧಿಸಿದೆ. ಸಹಕಾರಿ ಫೆಡರಲಿಸಂ ಅನ್ನು ಬಲಪಡಿಸಬೇಕು ಎಂಬ ಹೆಚ್ಚಿನ ಆಸಕ್ತಿಯಿಂದಾಗಿ ಈ ಸಭೆಯಲ್ಲಿ ಭಾಗವಹಿಸಿದೆ. ಬಜೆಟ್ ಕೂಡ ರಾಜಕೀಯ ಪಕ್ಷಪಾತವನ್ನು ಹೊಂದಿದೆ. ಬೇರೆ ರಾಜ್ಯಗಳ ಬಗ್ಗೆ ಏಕೆ ತಾರತಮ್ಯ ಮಾಡುತ್ತಿದ್ದೀರಿ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ನೀತಿ ಆಯೋಗಕ್ಕೆ ಯಾವುದೇ ಹಣಕಾಸಿನ ಅಧಿಕಾರವಿಲ್ಲ, ಅದು ಹೇಗೆ ಕೆಲಸ ಮಾಡುತ್ತದೆ? ಅದಕ್ಕೆ ಹಣಕಾಸಿನ ಅಧಿಕಾರ ನೀಡಿ ಅಥವಾ ಯೋಜನಾ ಆಯೋಗವನ್ನು ಮರಳಿ ತನ್ನಿ” ಎಂದು ಆಗ್ರಹಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X