ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ನಿಯಮಾನುಸಾರ ಜಾಗ ಮೀಸಲು: ಎಂ ಬಿ ಪಾಟೀಲ್‌

Date:

Advertisements

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇ. 24.1ರಷ್ಟು ಜಾಗವನ್ನು‌ ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ನಿಯೋಗವು ಸಚಿವರ ಬಳಿ ಮಾತನಾಡಿ, “ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ” ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

Advertisements

ಇದಕ್ಕೆ ಸ್ಪಂದಿಸಿದ ಸಚಿವರು, “ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇಕಡಾ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರಕಾರದ ಬದ್ಧತೆಯ ಬಗ್ಗೆ ಅನುಮಾನ ಬೇಡ. ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು” ಎಂದು ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

“ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು” ಎಂದು ಅವರು ನುಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X