ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ: ರೈತರಿಗೆ ಭರವಸೆ ನೀಡಿದ ಸಚಿವ ಚಲುವರಾಯಸ್ವಾಮಿ

Date:

Advertisements

ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಟ್ರಯಲ್ ಬ್ಲಾಸ್ಟ್‌ಗೆ ಸಂಬಂಧಿಸಿ ರೈತ ನಾಯಕರೊಂದಿಗೆ ಸಂವಾದ ನಡೆಸಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ‘ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ’ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇಂದು(ಶನಿವಾರ) ಮಂಡ್ಯ ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಸಂವಾದ ನಡೆಸಿದ ಅವರು, “ಹೈಕೋರ್ಟಿನಲ್ಲಿ ಮುಂದಿನ ಆದೇಶ ಬರುವವರೆಗೂ ಟ್ರಯಲ್ ಬ್ಲಾಸ್ಟ್ ಸ್ಥಗಿತಗೊಳಿಸುತ್ತೇವೆ. ಹೈಕೋರ್ಟಿನ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ” ಎಂದು ಹೇಳಿದರು.

“ಯಾವುದೇ ಟ್ರಯಲ್ ಬ್ಲಾಸ್ಟ್ ಬೇಡ. ಕೆಆರ್‌ಎಸ್ ಉಳಿವಿಗಾಗಿ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಸುಗ್ರೀವಾಜ್ಞೆಯನ್ನು ತನ್ನಿ” ಎಂದು ರೈತ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.

Advertisements

ಟ್ರಯಲ್ ಬ್ಲಾಸ್ಟ್ ಸಭೆ

ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಕೊನೆಯಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, “ಜುಲೈ 15ಕ್ಕೆ ಹೈಕೋರ್ಟಿನಲ್ಲಿ ವಿಚಾರಣೆಗೆ ಬರಲಿದೆ. ಮುಖ್ಯಮಂತ್ರಿಗಳು, ಸರಕಾರಿ ವಕೀಲರು, ಅಧಿಕಾರಿಗಳೊಂದಿಗೆ ನಿಮ್ಮೆಲ್ಲರ ಅಭಿಪ್ರಾಯಗಳನ್ನು ತಿಳಿಸುತ್ತೇನೆ. ಕೆಆರ್‌ಎಸ್ ಉಳಿವಿಗಾಗಿ ವಾದ ಮಂಡಿಸಲಾಗುವುದು. ನ್ಯಾಯಾಲಯದ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ” ಎಂದು ತಿಳಿಸಿದರು.

ಮಂಡ್ಯ ಜಿಲ್ಲಾಡಳಿತವು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂಲಕ ಪರೀಕ್ಷಾರ್ಥ ಬ್ಲಾಸ್ಟ್‌ (ಟ್ರಯಲ್ ಬ್ಲಾಸ್ಟ್) ನಡೆಸುವ ಸಲುವಾಗಿ ಜುಲೈ 3, 4, ಮತ್ತು 5ರಂದು ಕುಳಿ ಕೊರೆಯುವ ಕಾರ್ಯ ನಡೆಸಿದೆ. ಜೊತೆಗೆ ಜು. 6 ಮತ್ತು 7ರಂದು ಪರೀಕ್ಷಾರ್ಥ ಸಿಡಿತ ನಡೆಸಲು ಸಿದ್ಧತೆ ನಡೆಸಿತ್ತು.

ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಧರಣಿ ನಡೆಸಿದ್ದರು. ಈ ವೇಳೆ ರೈತರನ್ನು ಭೇಟಿ ಮಾಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು, ಜು.6 (ಶನಿವಾರ) ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮುಂದಾಳತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ರೈತರನ್ನು ಆಹ್ವಾನಿಸಿದ್ದರು. ಆ ಬಳಿಕ ಧರಣಿ ಕೈಬಿಟ್ಟು, ಸಭೆಯಲ್ಲಿ ರೈತರು ಭಾಗವಹಿಸಿದ್ದರು.

ಈ ಸಭೆಯಲ್ಲಿ ಶಾಸಕರಾದ ಬಾಬು ಬಂಡಿಸಿದ್ದೇಗೌಡ, ರವಿ ಗಣಿಗ, ಜಿಲ್ಲಾಧಿಕಾರಿ ಕುಮಾರ್, ರೈತ ಮುಖಂಡರಾದ ಎ ಎಸ್ ಕೆಂಪೂಗೌಡ, ಲಿಂಗಪ್ಪಾಜಿ, ಸುನಂದಮ್ಮ, ಮಹಿಳಾ ಮುನ್ನಡೆಯ ಪೂರ್ಣಿಮಾ, ಪ್ರಸನ್ನಗೌಡ, ಕೆ ಆರ್ ರವೀಂದ್ರ, ಗೆಜ್ಜಲಗೆರೆ ಶಂಕರಯ್ಯ ಇನ್ನೂ ಮುಂತಾದ ಮುಖಂಡರು ಭಾಗವಹಿಸಿದ್ದರು.

ಸಭೆ 4

ಟ್ರಯಲ್ ಬ್ಲಾಸ್ಟ್ ಸಭೆ 1

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X