ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

Date:

Advertisements
  • ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ ಎಂದ ನಾಯಕಿ
  • ಮರದ ಬದಲು ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಬಳಸಿ ಎಂದು ಜನತೆಗೆ ಕರೆ

ಕತ್ತೆ ಹಾಲಿನ ಸಾಬೂನು ಯಾವಾಗಲೂ ಮಹಿಳೆಯರ ದೇಹವನ್ನು ಸುಂದರವಾಗಿ ಇಡುತ್ತದೆ. ಈಜಿಪ್ಟ್‌ ರಾಣಿ ಕ್ಲಿಯೋಪಾತ್ರಾ ಕೂಡ ಕತ್ತೆಯ ಹಾಲಿನಿಂದ ಸ್ನಾನ ಮಾಡುತ್ತಿದ್ದರು ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು ಎನ್ನಲಾದ ವಿಡಿಯೋದಲ್ಲಿ, “ಕತ್ತೆ ಹಾಲಿನಿಂದ ತಯಾರಿಸಿದ ಸೋಪುಗಳಿಗೆ ದಿಲ್ಲಿಯಲ್ಲಿ 500 ರೂ. ಬೆಲೆ ಇದೆ. ನಾವು ಮೇಕೆ ಹಾಲು ಮತ್ತು ಕತ್ತೆಯ ಹಾಲಿನೊಂದಿಗೆ ಸಾಬೂನು ತಯಾರಿಸಲು ಏಕೆ ಪ್ರಾರಂಭಿಸಬಾರದು?” ಎಂದು ಮೇನಕಾ ಗಾಂಧಿ ಪ್ರಶ್ನಿಸಿದ್ದಾರೆ.

“ಲಡಾಖ್ ಸಮುದಾಯವು ಸಾಬೂನು ತಯಾರಿಸಲು ಕತ್ತೆಯ ಹಾಲನ್ನು ಬಳಸುತ್ತದೆ. ನೀವು ಕತ್ತೆಯನ್ನು ನೋಡಿ ಎಷ್ಟು ದಿನವಾಯಿತು? ಅವುಗಳ ಸಂಖ್ಯೆ ಕುಸಿಯುತ್ತಿದೆ. ಅಗಸ ಸಮುದಾಯ ಕೂಡ ಕತ್ತೆಗಳನ್ನು ಬಳಸುವುದನ್ನು ನಿಲ್ಲಿಸಿದೆ. ಕತ್ತೆಗಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಗಮನಿಸಿದ ಒಂದು ಸಮುದಾಯ ಕತ್ತೆಗಳಿಂದ ಹಾಲನ್ನು ಕರೆದು, ಆ ಹಾಲಿನಿಂದ ಸಾಬೂನು ತಯಾರಿಸುವುದನ್ನು ಪ್ರಾರಂಭಿಸಿತು. ಈ ಹಾಲಿನಿಂದ ಮಾಡಿದ ಸೋಪು ಮಹಿಳೆಯರ ದೇಹವನ್ನು ಎಂದೆಂದಿಗೂ ಸುಂದರವಾಗಿಡುತ್ತದೆ” ಎಂದು ಮೇನಕಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹೊಸ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಪದವಿ ದಾಖಲೆಗಳ ಪ್ರದರ್ಶನವಾಗಲಿ; ಸಂಜಯ್‌ ರಾವುತ್ ಆಗ್ರಹ

ಮರಗಳು ಕಣ್ಮರೆಯಾಗುತ್ತಿರುವ ಬಗ್ಗೆ ಕೂಡ ಮೇನಕಾ ಗಾಂಧಿ ಮಾತನಾಡಿದ್ದು, “ಮರಗಳು ಕಣ್ಮರೆಯಾಗುತ್ತಿರುವುದರಿಂದ ಕಟ್ಟಿಗೆ ದುಬಾರಿಯಾಗುತ್ತಿದೆ. ಇದೇ ಕಾರಣಕ್ಕೆ ಅಂತ್ಯಸಂಸ್ಕಾರದ ವೆಚ್ಚವೂ ಹೆಚ್ಚಾಗಿದೆ. ಮರದ ಬೆಲೆ ಎಷ್ಟು ಹೆಚ್ಚಾಗಿದೆ ಎಂದರೆ ಸಾವಿನಲ್ಲೂ ಜನ ತಮ್ಮ ಕುಟುಂಬವನ್ನು ಮತ್ತಷ್ಟು ಬಡತನಕ್ಕೆ ತಳ್ಳುತ್ತಿದ್ದಾರೆ” ಎಂದಿದ್ದಾರೆ.

“ಮರಕ್ಕೆ 15,000 ರಿಂದ 20,000 ರೂ. ನೀಡುವುದಕ್ಕಿಂತ ನಾವು ಹಸುವಿನ ಸಗಣಿಗೆ ಸುಗಂಧ ದ್ರವ್ಯ ಸೇರಿಸಿ ಮೃತದೇಹವನ್ನು ಸುಡಲು ಬಳಸಬೇಕು. ಇದರಿಂದ ಶವಸಂಸ್ಕಾರದ ವೆಚ್ಚವನ್ನು ಕೇವಲ 1,500 ರೂ.ನಿಂದ 2,000 ರೂ.ಕ್ಕೆ ಇಳಿಸುತ್ತದೆ. ಜೊತೆಗೆ ಹಸುವಿನ ಸಗಣಿಯಿಂದ ಮಾಡಿದ ಮರದ ದಿಮ್ಮಿಗಳನ್ನು ಮಾರಾಟ ಮಾಡುವುದರ ಮೂಲಕ ಲಕ್ಷಾಂತರ ರೂ. ಆದಾಯ ಗಳಿಸಬಹುದು” ಎಂದು ಮೇನಕಾ ಗಾಂಧಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X