ಮಣಿಪುರ ವಿಧಾನಸಭೆ ಅಧಿವೇಶನ ಪ್ರಾರಂಭ; ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು

Date:

Advertisements

ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ ನೀಡಬೇಕು ಎಂದು ಶಾಸಕರು ಹಲವು ದಿನಗಳಿಂದ ಆಗ್ರಹಿಸುತ್ತಿದ್ದಾರೆ.

ಕಳೆದ ವರ್ಷ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದೆ. ಇದಾದ ಬಳಿಕ ಮೂರನೇ ಬಾರಿಗೆ ಅಧಿವೇಶನ ನಡೆಯುತ್ತಿದ್ದು ಆಗಸ್ಟ್ 12ರವರೆಗೆ ಕಲಾಪ ನಡೆಯಲಿದೆ. ಕಳೆದ ಅಧಿವೇಶನದಲ್ಲಿಯೂ ತಮ್ಮ ಭದ್ರತೆಯ ಕಾರಣಕ್ಕೆ ಅಧಿವೇಶನಕ್ಕೆ ಹಾಜರಾಗಿಲ್ಲ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಅಧಿವೇಶನಕ್ಕೆ ಹಾಜರಾಗುವಂತೆ ಮನವಿ ಮಾಡಿದರೂ ಕೂಡಾ ಇಬ್ಬರು ಕುಕಿ ಪೀಪಲ್ಸ್ ಅಲಯನ್ಸ್‌ಗೆ ಸೇರಿದ ಸಚಿವರು ಮತ್ತು ಒಬ್ಬ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿರುವ ಶಾಸಕ, ಏಳು ಬಿಜೆಪಿ ಶಾಸಕರು ಅಧಿವೇಶನಕ್ಕೆ ಹಾಜರಾಗಿಲ್ಲ.

Advertisements

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಅವರೂ ಕೂಡಾ 10 ಕುಕಿ ಶಾಸಕರು ವಿಧಾನಸಭೆ ಅಧಿವೇಶನಕ್ಕೆ ಹಾಜರಾಗುವಂತೆ ತಿಳಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ಮತ್ತು ಸಹಜ ಸ್ಥಿತಿಗೆ ಮರುಳಲು ನಮಗೆ ಇದು ಉತ್ತಮ ದಾರಿಯಾಗಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವ 10 ಕುಕಿ ಶಾಸಕರಿಗೆ ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯದ ಮೂಲಕ ಪಡೆಯಬಹುದು” ಎಂದು ಸಲಹೆ ನೀಡಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ, ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಚುರಚಂದಪುರ ಜಿಲ್ಲೆಯ ಸೈಕೋಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಅವರು ಅಧಿವೇಶನಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದರು.

ಇದನ್ನು ಒದಿದ್ದೀರಾ? ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

“ನನ್ನ ಜನರು ಇಂಫಾಲ್‌ಗೆ ಕಾಲಿಡಲು ಸಾಧ್ಯವಾಗದಿದ್ದಾಗ, ರಾಜ್ಯದ ರಾಜಧಾನಿಯಲ್ಲಿ ನಡೆಯುವ ವಿಧಾನಸಭೆಯಲ್ಲಿ ನಾನು ಹೇಗೆ ಭಾಗವಹಿಸಲಿ” ಎಂದು ಹಾಕಿಪ್ ಪ್ರಶ್ನಿಸಿದ್ದಾರೆ. ಹಾಗೆಯೇ “ತಮ್ಮ ಸಮುದಾಯದವರು ವಾಸಿಸುವ ಗುಡ್ಡಗಾಡು ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವಿಲ್ಲದೆ ಜನಾಂಗೀಯ ಕಲಹಕ್ಕೆ ಶಾಶ್ವತ ಪರಿಹಾರವಿಲ್ಲ” ಎಂದು ಅಭಿಪ್ರಾಯಿಸಿದರು.

ಕಳೆದ ವರ್ಷ ಆರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ ಒಟ್ಟಾಗಿ 226 ಜನರು ಸಾವನ್ನಪ್ಪಿದು ಕುಕಿ ಮತ್ತು ಮೈತಿ ಸಮುದಾಯವು ಪ್ರತ್ಯೇಕವಾಗಿದೆ. ಇಂಫಾಲ್‌ನಲ್ಲಿ ಯಾವುದೇ ಕುಕಿ ಸಮುದಾಯದವರಿಗೆ ವಾಸ ಸುರಕ್ಷಿತವಾಗಿಲ್ಲ. ಈ ಕಾರಣದಿಂದಾಗಿ ಕುಕಿ ಸಮುದಾಯದ ಜನರು ಪ್ರತ್ಯೇಕವಾಗಿದ್ದಾರೆ.

ಇನ್ನು ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಸುಮಾರು ಎರಡಕ್ಕೂ ಅಧಿಕ ತಿಂಗಳುಗಳ ಕಾಲ ಮಣಿಪುರದ ಬಗ್ಗೆ ಪ್ರಸ್ತಾಪ ಮಾಡದ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿಪಕ್ಷಗಳ ಒತ್ತಡದ ಮೇರೆಗೆ ಮಣಿಪುರ ಹಿಂಸಾಚಾರ ಬಗ್ಗೆ ಮಾತನಾಡಿದ್ದಾರೆ. ಆದರೆ ಈವರೆಗೂ ದೇಶ ವಿದೇಶ ಸುತ್ತಾಡುವ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿಲ್ಲ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X