ಮಣಿಪುರ | ಇಂಟರ್ನೆಟ್ ಸೇವೆ ಮರು ಆರಂಭಕ್ಕೆ ಕಾರ್ಯವಿಧಾನ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Date:

Advertisements

ಜನರಿಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮತ್ತೆ ಒದಗಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕಾರ್ಯವಿಧಾನಗಳನ್ನು ರಚಿಸುವಂತೆ ಮಣಿಪುರ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ಸೂಚನೆ ನೀಡಿದೆ.

ಮಣಿಪುರದಲ್ಲಿ ಮೇ 3ರಿಂದ ಹಿಂಸಾಚಾರ ನಡೆಯುತ್ತಿದ್ದು, ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ, ಇಂಟರ್‌ನೆಟ್‌ ಇಲ್ಲದೆ ಯಾವ ಕೆಲಸಗಳೂ ನಡೆಯುತ್ತಿಲ್ಲ. ಇಂಟರ್‌ನೆಟ್‌ ಸೇವೆಯನ್ನು ಮರು ಆರಂಭಿಸಲು ನಿರ್ದೇಶಿಸುವಂತೆ ಹಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಅಹಂತೇಮ್ ಬಿಮೋಲ್ ಸಿಂಗ್ ಮತ್ತು ನ್ಯಾಯಮೂರ್ತಿ ಎ ಗುಣೇಶ್ವರ್ ಶರ್ಮಾ ಅವರ ಪೀಠವು, “ರಾಜ್ಯ ಅಧಿಕಾರಿಗಳು, ವಿಶೇಷವಾಗಿ ಗೃಹ ಇಲಾಖೆಯು ಮೊಬೈಲ್ ಫೋನ್‌ಗಳ ಇಂಟರ್ನೆಟ್ ಸೇವೆಗಳನ್ನು ಮರುಆರಂಭಿಸಲು ಕಾರ್ಯವಿಧಾನವನ್ನು ರೂಪಿಸಬೇಕು. ಅದಕ್ಕಾಗಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಪರಿಶೀಲಿಸಬೆಕು” ಎಂದು ಹೇಳಿದೆ.

Advertisements

ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, “ಕೆಲವು ಅಧಿಕಾರಿಗಳ ಮೊಬೈಲ್‌ಗಳು ಶ್ವೇತಪಟ್ಟಿಯಲ್ಲಿವೆ, ಅಂತಹ ಮೊಬೈಲ್ ಫೋನ್‌ಗಳಿಂದ ಯಾವುದೇ ಡೇಟಾ ಸೋರಿಕೆಯಾಗಿಲ್ಲ. ಹೀಗಾಗಿ, ಎಲ್ಲ ಮೊಬೈಲ್ ಫೋನ್‌ಗಳನ್ನು ಹಂತಹಂತವಾಗಿ ಶ್ವೇತಪಟ್ಟಿಗೆ ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೆಕು” ಎಂದು ಮನವಿ ಮಾಡಿದರು.

“ಸೇವಾ ಪೂರೈಕೆದಾರರು ಸಲ್ಲಿಸಿದ ವರದಿಯ ಪ್ರಕಾರ, ಶ್ವೇತಪಟ್ಟಿ ಮಾಡದ ಯಾವುದೇ ಇತರ ಸಂಖ್ಯೆಗಳಿಗೆ ಯಾವುದೇ ಡೇಟಾ ಸೋರಿಕೆಯಾಗಿಲ್ಲ” ಎಂದು ವಕೀಲರು ಮನವರಿಕೆ ಮಾಡಿಕೊಟ್ಟರು.

ಕಾರ್ಯವಿಧಾನಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ ಹೈಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X