ವಿಧಾನಸಭೆ | ಬಿಜೆಪಿ ಸದಸ್ಯರನ್ನು ಹೊತ್ತು ಹೊರ ಹಾಕಿದ ಮಾರ್ಷಲ್‌ಗಳು

Date:

Advertisements

ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ ಬಳಿಕ, ಬಿಜೆಪಿ ಸದಸ್ಯರು ಸದನದ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕೆಲ ಬಿಜೆಪಿ ಸದಸ್ಯರನ್ನು ಭುಜದ ಮೇಲೆ ಹೊತ್ತುಕೊಂಡು ಮಾರ್ಷಲ್‌ಗಳು ಹೊರ ಹಾಕಿದ ಘಟನೆಯೂ ನಡೆಯಿತು.

ಈ ನಡುವೆ ಮಾರ್ಷಲ್‌ಗಳು ಮತ್ತು ಬಿಜೆಪಿ ಸದಸ್ಯರ ನಡುವೆ ತಳ್ಳಾಟ ನೂಕಾಟವೂ ನಡೆಯಿತು. ಆ ಬಳಿಕ ಬಿಜೆಪಿ ಮಲ್ಲೇಶ್ವರಂ ಶಾಸಕ ಡಾ. ಸಿ. ಎನ್. ಅಶ್ವಥ್ ನಾರಾಯಣ್‌ ಅವರನ್ನು ಭುಜದ ಮೇಲೆ ಹೊತ್ತೊಯ್ದು, ಹೊರಹಾಕಿದರು.

ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Advertisements

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕಲಾಪ ಮತ್ತೆ ಆರಂಭಗೊಂಡಿದೆ. ಆದರೆ ಯಾವುದೇ ಬಿಜೆಪಿ ಸದಸ್ಯರಾಗಲೀ, ಜೆಡಿಎಸ್ ಸದಸ್ಯರಾಗಲೀ ಹಾಜರಾಗಿಲ್ಲ.

ಸದನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ, ‘ಪ್ರವೇಶ ದ್ವಾರದ ಬಳಿ ಬಿಜೆಪಿಯವರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ದ್ವಾರದ ಬಳಿ ಇದ್ದ ಗಾಜು ಒಡೆದ ಪರಿಣಾಮ ಪತ್ರಕರ್ತರೋರ್ವರ ಕೈಗೆ ಗಾಯವಾಗಿದೆ. ಪೊಲೀಸರಿಗೆ ದೂರು ನೀಡಿ, ಕಾನೂನು ಕ್ರಮ ಕೈಗೊಳ್ಳಬೇಕು. ಈ ಥರ ಬಿಜೆಪಿಯವರು ನಡೆದುಕೊಂಡಿರುವುದು ಸರಿಯಲ್ಲ. ಈ ರೀತಿ ಮುಂದೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಸ್ಪೀಕರ್ ಯು ಟಿ ಖಾದರ್ ಅವರನ್ನು ಆಗ್ರಹಿಸಿದರು.

WhatsApp Image 2023 07 19 at 5.58.04 PM edited

ಈ ನಡುವೆ 10 ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸಭೆಯ ಸ್ಪೀಕರ್ ಕಚೇರಿ ಎದುರು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X