ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

Date:

Advertisements

2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರು ದೇಶದಲ್ಲಿ ಯಾವುದೇ ರೀತಿಯ ಗಂಭೀರ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ಚುನಾವಣೆ ಗೆಲ್ಲಲು ರಾಮಮಂದಿರ ಸ್ಫೋಟ ಅಥವಾ ಪ್ರಭಾವಿ ಬಿಜೆಪಿ ನಾಯಕನ ಹತ್ಯೆ ಮಾಡಿಸಿ ರಾಜಕೀಯ ಲಾಭ ಪಡೆದುಕೊಳ್ಳಬಹುದು. ಪುಲ್ವಾಮ ದಾಳಿ ಮಾಡಿಸಿದವರು ಏನನ್ನು ಬೇಕಾದರೂ ಮಾಡಲು ಶಕ್ತರು” ಎಂದು ಮಲಿಕ್ ಆರೋಪಿಸಿದರು.

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಉಲ್ಲೇಖಿಸಿದ ಮಲಿಕ್, 2019ರ ಪುಲ್ವಾಮಾ ದಾಳಿಯನ್ನು ಉಂಟುಮಾಡುವ ಸಾಮರ್ಥ್ಯವಿರುವ ಯಾರಾದರೂ ರಾಜಕೀಯ ಉದ್ದೇಶಗಳನ್ನು ಸಾಧಿಸಲು ಏನು ಬೇಕಾದರೂ ಮಾಡಬಹುದು” ಎಂದರು.

Advertisements

“ಪ್ರಧಾನಿ ಮೋದಿಗೆ ಹೇಗೆ ಕುತಂತ್ರವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲುವ ಕಾರಣದಿಂದ ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಸತ್ಯಪಾಲ್ ಮಲಿಕ್ ಆಗ್ರಹಿಸಿದರು.

ಇತ್ತೀಚೆಗೆ ‘ದಿ ವೈರ್‌’ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿದ್ದ ಸತ್ಯಪಾಲ್ ಮಲಿಕ್, “ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅವುಗಳನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಹಲವು ಲೋಪಗಳಾಗಿದ್ದವು. ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ. ತಾವು ಈ ತಪ್ಪುಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತಂದರೂ, ಅವರು ನನಗೆ ಮೌನವಾಗಿರುವಂತೆ ಸೂಚಿಸಿದ್ದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಮಗೆ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದರು” ಎಂದು ಗಂಭೀರ ಆರೋಪ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್‌ಗೆ ‘ಸುಪ್ರೀಂ’ನಿಂದ ಬಿಗ್‌ ರಿಲೀಫ್‌

ಏತನ್ಮಧ್ಯೆ, ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿ ಸರ್ಕಾರವು ಅಮಾಯಕರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಗಲಭೆಯನ್ನು ಉತ್ತೇಜಿಸುತ್ತಿದೆ. ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಅಷ್ಟು ಸುಲಭವಾಗಿ ಕೈಗೆಟುಕುವುದಿಲ್ಲ ಎಂದು ಹೇಳಿದ್ದಾರೆ.

“ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಮೋದಿ ಹೇಳಿದ್ದರು” ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಪುಲ್ವಾಮ ದಾಳಿ ಸಂದರ್ಭ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ರಾಜ್ಯಪಾಲರಾಗಿದ್ದಾಗಲೇ ಸರಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ರಾಜೀನಾಮೆ ನಂತರವೂ ಸರಕಾರದ ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X