ರಾಹುಲ್‌ ಅನರ್ಹತೆ ವಿಚಾರ | ಕಾಂಗ್ರೆಸ್‌ನಿಂದ ನಿಲುವಳಿ ಸೂಚನೆ ಸಲ್ಲಿಕೆ

Date:

  • ಏಪ್ರಿಲ್‌ 6ರವರೆಗೆ ನಡೆಯಲಿರುವ ಎರಡನೇ ಅವಧಿಯ ಅಧಿವೇಶನ
  • ಲೋಕಸಭೆಗೆ ನಿಲುವಳಿ ಸೂಚನೆ ಸಲ್ಲಿಸಿದ ಮನೀಶ್‌ ತಿವಾರಿ

ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಸಂಸತ್ತಿನಲ್ಲಿರುವ ಕಾಂಗ್ರೆಸ್‌ ಸಂಸದೀಯ ಪಕ್ಷದ ಕಚೇರಿಯಲ್ಲಿ ಸೋಮವಾರ (ಮಾರ್ಚ್‌ 27) ಬೆಳಿಗ್ಗೆ 10.30ಕ್ಕೆ ಸಭೆ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆಯ ವಿಚಾರವಾಗಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ. ಅದಾನಿ ಹಗರಣ ಹಾಗೂ ರಾಹುಲ್‌ ಅವರ ಅನರ್ಹತೆಗೆ ಸಂಬಂಧಿಸಿ ಕೇಂದ್ರದ ವಿರುದ್ಧ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಕಾಂಗ್ರೆಸ್‌ ಸಂಸದರು ಸಂಸತ್ತು ಅಧಿವೇಶನಕ್ಕೆ ಕಪ್ಪು ವಸ್ತ್ರ ಧರಿಸಿ ಹಾಜರಾಗಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರ ಅನರ್ಹತೆ ವಿಚಾರವನ್ನು ಚರ್ಚೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕ ಮನೀಶ್‌ ತಿವಾರಿ ಸೋಮವಾರ ನಿಲುವಳಿ ಸೂಚನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎರಡನೇ ಅವಧಿಯ ಬಜೆಟ್‌ ಅಧಿವೇಶನ ಆರಂಭವಾದಾಗಿನಿಂದ ಉದ್ಯಮಿ ಗೌತಮ್ ಅದಾನಿ ಕುರಿತ ಹಿಂಡನ್‌ಬರ್ಗ್‌ ಸಂಶೋಧನಾ ವರದಿ ವಿಚಾರವಾಗಿ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಒತ್ತಾಯಿಸಿ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ನರೇಂದ್ರ ಮೋದಿ ಒಬ್ಬ ಹೇಡಿ: ಪ್ರಿಯಾಂಕ ವಾದ್ರಾ ಕಿಡಿ

ಸಮಾನಮನಸ್ಕ ಪ್ರತಿಪಕ್ಷಗಳು ಸದನದಲ್ಲಿ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಸಂಸದರು ಸಭೆ ಸೇರಿವೆ. ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದರೂ ಭಾಗವಹಿಸಿರುವುದಾಗಿ ವರದಿಯಾಗಿದೆ.

ಎರಡನೇ ಅವಧಿಯ ಬಜೆಟ್‌ ಅಧಿವೇಶನದ ಮೂರನೇ ವಾರವೂ ಪ್ರತಿಪಕ್ಷಗಳ ಪ್ರತಿಭಟನೆಗೆ ಉಭಯ ಸದನಗಳೂ ಸಾಕ್ಷಿಯಾಗಿವೆ. ಮಾರ್ಚ್‌ 13ರಿಂದ ಆರಂಭವಾಗಿರುವ ಎರಡನೇ ಅವಧಿ ಅಧಿವೇಶನ ಏಪ್ರಿಲ್‌ 6ರವರೆಗೆ ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಝೊಮ್ಯಾಟೊಗೆ 11 ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ನೋಟಿಸ್

ಆನ್‌ಲೈನ್ ಆಹಾರ ವಿತರಣಾ ಪ್ಲಾಟ್‌ಫಾರ್ಮ್ ಝೊಮ್ಯಾಟೊಗೆ ಜುಲೈ 2017 ರಿಂದ ಮಾರ್ಚ್...

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...