ದೇಶವಿರೋಧಿ ಚಟುವಟಿಕೆ ಆರೋಪ: ಜಮ್ಮು-ಕಾಶ್ಮೀರದ ಮುಸ್ಲಿಂ ಲೀಗ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

Date:

Advertisements

ದೇಶವಿರೋಧಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಹೆಸರಿನ ಸಂಘಟನೆಗೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ(ಯುಎಪಿಎ) ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸಾರತ್ ಆಲಂ ಗ್ರೂಪ್) ಸಂಘಟನೆಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸಾರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

Advertisements

“ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶವಾಗಿದೆ” ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮುಸ್ಲಿಂ ಲೀಗ್ ಮಸಾರತ್ ಆಲಂ ಗ್ರೂಪ್ ಮಸಾರತ್ ಆಲಂ ಭಟ್ ನೇತೃತ್ವದಲ್ಲಿದೆ. ಈ ಸಂಘಟನೆಯು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿ, ಈ ನಿಷೇಧ ಹೇರಿದೆ. ಸಂಘಟನೆಯ ಸದಸ್ಯರು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅಲ್ಲದೆ, ದೇಶದ ಸಾಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತಿದ್ದಾರೆ ಎಂದು ಅಧಿಸೂಚನೆ ಹೇಳಿದೆ.

masarat alam bhat

ಸಂಘಟನೆಯ ಮುಖಂಡರು, ವಿಶೇಷವಾಗಿ ಅದರ ಅಧ್ಯಕ್ಷ ಮಸಾರತ್ ಆಲಂ, ದೇಶದ ಏಕತೆ, ಸಮಗ್ರತೆ, ಭದ್ರತೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧವು ಮುಂದಿನ ಐದು ವರ್ಷಗಳವರೆಗೆ ಇರಲಿದೆ ಎಂದು ವರದಿಯಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಂಘಟನೆಯನ್ನು ‘ಕಾನೂನುಬಾಹಿರ’ ಅಥವಾ ‘ಭಯೋತ್ಪಾದಕ’ ಎಂದು ಘೋಷಿಸಬಹುದು. ಇದನ್ನೇ ಸಾಮಾನ್ಯ ಭಾಷೆಯಲ್ಲಿ ‘ನಿರ್ಬಂಧ ಅಥವಾ ನಿಷೇಧ’ ಎನ್ನುತ್ತಾರೆ.

ಸಂಘಟನೆಯನ್ನು ‘ಕಾನೂನುಬಾಹಿರ’ ಅಥವಾ ‘ಭಯೋತ್ಪಾದಕ’ ಅಥವಾ ‘ನಿಷೇಧಿಸಲಾಗಿದೆ’ ಎಂದು ಘೋಷಿಸಿದರೆ, ಅದರ ಸದಸ್ಯರನ್ನು ಅಪರಾಧಿಗಳೆಂದು ಪರಿಗಣಿಸಬಹುದು ಮತ್ತು ಅದರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.

ಗೃಹ ಸಚಿವಾಲಯದ ಪ್ರಕಾರ, ಪ್ರಸ್ತುತ ದೇಶದಲ್ಲಿ 42 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಲಾಗಿದೆ. ಅಂದರೆ, ಅವುಗಳನ್ನು ನಿಷೇಧಿಸಲಾಗಿದೆ. ಇವುಗಳಲ್ಲಿ ಅನೇಕ ಖಲಿಸ್ತಾನಿ ಸಂಘಟನೆಗಳು, ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್, ಎಲ್‌ಟಿಟಿಇ ಮತ್ತು ಅಲ್ ಖೈದಾ ಮುಂತಾದ 42 ಸಂಘಟನೆಗಳು ಸೇರಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X