ಸಚಿವ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತಕ್ಕೆ ದೂರು; ನಿರ್ಮಾಣ ಮಾಡದ ಕಟ್ಟಡಕ್ಕೆ 97ಕೋಟಿ ಬಿಲ್

Date:

  • ಕಟ್ಟಡ ನಿರ್ಮಿಸದೆ 97 ಕೋಟಿ ರೂಪಾಯಿ ಬಿಲ್ ಪಡೆದುಕೊಂಡ ಆರೋಪ
  • ಲೋಕಾಯುಕ್ತರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ

ನಿರ್ಮಾಣ ಮಾಡದ ಕಟ್ಟಡಕ್ಕೆ 97 ಕೋಟಿ ರೂಪಾಯಿ ಬಿಲ್ ಪಡೆದ ಆರೋಪ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೆಗಲೇರಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಬಸವರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕೆ.ಆರ್.ಪುರಂನ ರಾಜೀವ್‌ಗಾಂಧಿ ನಗರದಲ್ಲಿರುವ ದೇವಸಂದ್ರ ವಾರ್ಡ್‌ನಲ್ಲಿ 8 ಸರ್ಕಾರಿ ಕಟ್ಟಡ ನಿರ್ಮಿಸಿರುವುದಾಗಿ ಹೇಳಿಕೊಂಡು ಕಂಟ್ರಾಕ್ಟರ್ ಆಗಿರುವ ಸಚಿವ ಬಸವರಾಜು ಬಿಬಿಎಂಪಿಗೆ ಬಿಲ್ ಸಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ ಇದಕ್ಕೆ ಮಹಾದೇವಪುರ ಕ್ಷೇತ್ರದ ಬಿ.ನಾರಾಯಣಪುರದಲ್ಲಿ ಇರುವ ಕಟ್ಟಡದ ಫೋಟೋ ನೀಡಿದ್ದಾರೆ. ಕೇವಲ ದಾಖಲೆಗಳಲ್ಲಿ ಮಾತ್ರ ಕಟ್ಟಡ ನಿರ್ಮಾಣ ಮಾಡಲಾಗಿದೆ.

ಶೌಚಾಲಯ ನಿರ್ಮಾಣ ಮಾಡದೆ ಫೋಟೋ ನೀಡಿ ಬಿಲ್ ಪಡೆದಿದ್ದಾರೆ. ಕಟ್ಟಡ ನಿರ್ಮಿಸದೆ 8 ಫೈಲ್ ನೀಡಿ ಬಿಲ್ ಪಡೆದಿದ್ದಾರೆ. ಈ ಎಲ್ಲ ದಾಖಲೆಗಳನ್ನು ಒಳಗೊಂಡ ದೂರನ್ನು ಟಿ ಜೆ ಅಬ್ರಾಹಂ ಲೋಕಾಯುಕ್ತರಿಗೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ…

ಒಟ್ಟಾರೆ 97 ಕೋಟಿ ರೂಪಾಯಿಗಳ ಮೊತ್ತದ ಬಿಲ್ ಇದಾಗಿದ್ದು, ಕಾಮಗಾರಿ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಟಿ ಜೆ ಅಬ್ರಾಹಂ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್,...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...