ಎಚ್‌ಡಿಕೆ ಸಿಎಂ ಆಗಿದ್ದಾಗ ಇದ್ದ ದರಪಟ್ಟಿ ಬಿಡುಗಡೆ ಮಾಡಿರಬಹುದು: ಚಲುವರಾಯಸ್ವಾಮಿ ತಿರುಗೇಟು

Date:

Advertisements

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡಿ, ದರಪಟ್ಟಿ ಬಿಡುಗಡೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಚ್‌ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರ ಆರೋಪಗಳಿಗೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡುತ್ತಾರೆ” ಎಂದರು.

“ಸದನದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವುದು, ಬಹುಶಃ ಅವರು ಸಿಎಂ ಆಗಿದ್ದಾಗ ಇದ್ದ ರೇಟ್ ಕಾರ್ಡ್ ಅನಿಸುತ್ತದೆ. ಚೆನ್ನಾಗಿಯೇ ಮಾಡಿದ್ದಾರೆ. ಅಭಿನಂದನೆ ಸಲ್ಲಿಸಬೇಕು” ಎಂದು ಟಾಂಗ್ ನೀಡಿದರು.

Advertisements

“ನಾನು ಒಕ್ಕಲಿಗ ಎಂಬ ಕಾರಣಕ್ಕೆ ನನ್ನ ವಿರುದ್ದ ಟಾರ್ಗೆಟ್ ಮಾಡಿದ್ದಾರೆ. ನಾನು ಎಚ್ ಡಿ ದೇವೇಗೌಡರ ಕುಟಂಬದ ಬಗ್ಗೆ ಮಾತಾಡಿಲ್ಲ. ಎಚ್‌ಡಿಕೆ ವಿಚಾರ ಎತ್ತಿದರೆ ಸಾಕು ಕುಟುಂಬ ಎನ್ನುತ್ತಾರೆ. ಕುಮಾರಸ್ವಾಮಿ ಯಾವಾಗಲೂ ಕುಟುಂಬದ ಜಪ ಮಾಡಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಅಭದ್ರೆತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

“ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೋ ಏನೋ ಗೊತ್ತಿಲ್ಲ. ಲೋಕಸಭಾ ಚುನಾವಣೆ ಇದೆ. ಹೀಗಾಗಿ ನನ್ನ ಮಂಡ್ಯ ಎನ್ನುತ್ತಿದ್ದಾರೆ” ಎಂದು ಸಚಿವ ಚಲುವರಾಯಸ್ವಾಮಿ ಕುಟುಕಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X