ಕೊಲೆಯಲ್ಲಿ ಹಿಂದುತ್ವ ಅಜೆಂಡ ಫಿಕ್ಸ್‌ ಮಾಡಲು ನನ್ನ ಪುತ್ರನ ವಿರುದ್ಧ ಆರೋಪ: ಎಚ್‌ ಸಿ ಮಹದೇವಪ್ಪ

Date:

Advertisements
  • ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಯತ್ನಿಸುವೆ
  • 8 ಲಕ್ಷ ರೂ. ಪರಿಹಾರದಲ್ಲಿ ಮೊದಲ ಕಂತು 4.12 ಲಕ್ಷ ರೂ. ಕುಟುಂಬದವರಿಗೆ ನೀಡಿದ್ದೇವೆ

ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್‌ ಹತ್ಯೆ ಪ್ರಕರಣವು ಧರ್ಮ ಮತ್ತು ರಾಜಕೀಯದ ವ್ಯಾಪ್ತಿ ಎರಡಕ್ಕೂ ಬರುವುದಿಲ್ಲ. ಆದರೂ ಬಿಜೆಪಿಯವರು ನನ್ನ ಪುತ್ರ ಸುನೀಲ್ ಬೋಸ್ ಹೆಸರನ್ನು ವಿನಾಕಾರಣ ಎಳೆದು ತರುತ್ತಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.

ಮೈಸೂರು ಜಿಲ್ಲೆಯ ತಿ. ನರಸೀಪುರದ ವೇಣುಗೋಪಾಲ್ ಮನೆಗೆ ಗುರುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಸಚಿವ ಎಚ್‌ ಸಿ ಮಹದೇವಪ್ಪ ಅವರು ಮಾತನಾಡಿದರು.

“ಪೊಲೀಸ್‌ ತನಿಖೆ ಸರಿ ದಾರಿಯಲ್ಲಿದೆ. ಘಟನೆಯಾದ ಕೆಲವೇ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಯವರು ಧರ್ಮದ ಬಣ್ಣ ಬಳಿಯಲು ಹೊರಟಿದ್ದಾರೆ” ಎಂದು ಆರೋಪಿಸಿದರು.

Advertisements

“ಕೊಲೆ ಪ್ರಕರಣದಲ್ಲಿ ಹಿಂದುತ್ವದ ಕಾರ್ಯಸೂಚಿಯನ್ನು ಹಬ್ಬಿಸುವ ಸಂಚನ್ನು ಬಿಜೆಪಿ ಮಾಡುತ್ತಿದೆ. ಈ ಆಟ ಬಹಳ ಕಾಲ ನಡೆಯುವುದಿಲ್ಲ. ಎಲ್ಲದಕ್ಕೂ ಹಿಂದುತ್ವದ ಕಾರ್ಯಸೂಚಿ ಮುಂದು ಮಾಡುವುದು ಆ ಪಕ್ಷದವರ ಚಾಳಿ. ಸುಳ್ಳನ್ನು ಸತ್ಯ ಮಾಡಲು ಆ ಪಕ್ಷದವರು ಹೊರಟಿದ್ದಾರೆ. ನನ್ನ ಮಗನ ಮೇಲೆ ಹೀಗೆ ಹಿಂದೆಯೂ ವಿನಾಕಾರಣ ಆರೋಪ ಮಾಡಿದ್ದರು” ಎಂದು ಆರೋಪಿಸಿದರು.

“ಯುವ ಬ್ರಿಗೇಡ್ ಸಂಘಟನೆ ಕಟ್ಟಿಕೊಂಡು ಹನುಮ ಜಯಂತಿಯನ್ನು ಚೆನ್ನಾಗಿಯೇ ಮಾಡಿದ್ದಾರೆ. ಅದಕ್ಕೆ ಯಾರ ಅಡ್ಡಿ ಅಥವಾ ತಕಾರರು ಇರಲಿಲ್ಲ. ಆ ಸಂಘಟನೆಯವರೇ ಬೈಕ್‌ ನಿಲುಗಡೆ ಮತ್ತು ಫೋಟೊ ಹಾಕುವ ವಿಚಾರದಲ್ಲಿ ಜಗಳವಾಡಿದ್ದಾರೆ. ಕಾರ್ಯಕ್ರಮ ಮುಗಿದ ನಂತರವೂ ಗಲಾಟೆ ಮಾಡಿಕೊಂಡಿದ್ದಾರೆ. ಆ ವೇಳೆ ಕೊಲೆಯಾಗಿದೆ” ಎಂದು ತಿಳಿಸಿದರು.

ಈ ಸುದ್ದಿಓದಿದ್ದೀರಾ? ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

“ಇದು ದೌರ್ಜನ್ಯದ ಪ್ರಕರಣವಲ್ಲ. ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ರೂ. ಪರಿಹಾರ ಕೊಡಬಹುದು. ಮೊದಲ ಕಂತಾಗಿ 4.12 ಲಕ್ಷ ರೂ.ಗಳನ್ನು ಈಗ ಕುಟುಂಬದವರಿಗೆ ನೀಡಿದ್ದೇವೆ. ಪ್ರಕರಣದ ದೋಷಾರೋಪ ಪಟ್ಟಿ ಸಿದ್ಧವಾದ ಮೇಲೆ ಉಳಿದ ಹಣ ನೀಡುತ್ತೇವೆ. ವೇಣುಗೋಪಾಲ್ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಕೊಡಿಸಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X