ಪ್ರಧಾನಮಂತ್ರಿ ಗ್ರಾಮೀಣ ಅವಾಸ್ ಯೋಜನೆಗೆ ವಾರದಲ್ಲಿ ಫಲಾನುಭವಿಗಳ ಪಟ್ಟಿ ಕೊಡಲು ಸಚಿವ ಜಮೀರ್ ಸೂಚನೆ

Date:

Advertisements
  • ಗ್ರಾಮಸಭೆ, ಶಾಸಕರ ಸಮಿತಿಯಿಂದ 2.90 ಲಕ್ಷ ಫಲಾನುಭವಿಗಳ ಆಯ್ಕೆ ಆಗಬೇಕಿದೆ
  • ಜುಲೈ 20 ಕ್ಕೆ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ

ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಗೆ ಗ್ರಾಮಸಭೆಗಳಿಂದ ಒಂದು ವಾರದಲ್ಲಿ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಕಳುಹಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆಯಾಗಿದ್ದು ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆಯಾಗಿದ್ದು ಉಳಿದ 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಶಾಸಕರು ಈ ಬಗ್ಗೆ ಗಮನಹರಿಸಿ ತಕ್ಷಣ ಗ್ರಾಮ ಸಭೆಗಳಿಂದ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲು ಖುದ್ದು ಆಸಕ್ತಿ ವಹಿಸಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಯೋಜನೆಯ ಫಲಾನುಭವಿಗಳ ಆಯ್ಕೆಗೆ ಎರಡು ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ಪಟ್ಟಿ ನೀಡಿಲ್ಲ. ಇದೀಗ ಜುಲೈ 20 ಕ್ಕೆ ಪಟ್ಟಿ ಅಂತಿಮಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಹೀಗಾಗಿ ಇದುವರೆಗೆ ಪಟ್ಟಿ ಅಂತಿಮಗೊಳಿಸದ ಶಾಸಕರು ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದರೆ ಯೋಜನೆ ಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ಗ್ರಾಮೀಣ ಭಾಗದಲ್ಲಿ ವಸತಿ ರಹಿತರ ಪಟ್ಟಿ ಸಿದ್ದಪಡಿಸಿ ಯೋಜನೆಗೆ ಅರ್ಹತೆ ಪಡೆದಿರುವವರನ್ನು ಗುರುತಿಸಲಾಗಿದೆ. ಅ ಪಟ್ಟಿಯಲ್ಲಿ ಹಂಚಿಕೆಗೆ ನಿಗದಿಯಾಗಿರುವ ಮನೆಗಳ ಸಂಖ್ಯೆಯಷ್ಟು ಫಲಾನುಭವಿಗಳ ಆಯ್ಕೆ ಆಗಬೇಕಾಗಿದೆ. ಗ್ರಾಮಸಭೆಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುದಾನ ನೀಡಲಿದೆ. ಸಾಮಾನ್ಯ ವರ್ಗಕ್ಕೆ ಒಂದು ಲಕ್ಷದ ಮೂರು ಸಾವಿರ ರೂ. ಎಸ್ಸಿ ಎಸ್ಟಿ ಸಮುದಾಯಕ್ಕೆ ಒಂದು ಲಕ್ಷ ಇಪ್ಪತ್ತು ಸಾವಿರ ರೂ. ಸಬ್ಸಿಡಿ ಸಿಗಲಿದ್ದು, 150 ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X