ಮುಡಾ ಆರೋಪ | ಸಿದ್ದರಾಮಯ್ಯ ವಿರುದ್ದ ಕೇಂದ್ರ ಸರ್ಕಾರ ಪ್ರಾಯೋಜಿತ ಹುನ್ನಾರ : ಸಚಿವ ರಾಜಣ್ಣ

Date:

Advertisements

ಬಿಜೆಪಿಯವರು ಮುಡಾ ಆರೋಪ ಮಾಡಿ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದೆ. ಇದೊಂದು ಕೇಂದ್ರ ಸರ್ಕಾರದ ಯೋಜಿತ ಮತ್ತು ಪ್ರಯೋಜಿತ ಹುನ್ನಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿ ಎಂ ಸಿದ್ದರಾಮಯ್ಯನವರ ಮೇಲೆ ಮಾಡುವ ಆರೋಪ ಇಡೀ ಅಹಿಂದ ವರ್ಗದ ಮೇಲೆ ಆರೋಪ‌ ಮಾಡಿದಂತೆ. ಹಾಗಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರೆ ಪಕ್ಷತೀತವಾಗಿ ಅಹಿಂದ ಸಮುದಾಯದವರು ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದರು.

“ಸಿದ್ದರಾಮಯ್ಯನವರು ಹಿಂದುಳಿದ ವರ್ಗದ ನಾಯಕ. ದೇವರಾಜ ಅರಸು ಬಳಿಕ ಉತ್ತಮ ಆಡಳಿತ ನೀಡುತ್ತಿರುವ ನಾಯಕ. ಹಿಂದುಳಿದ ವರ್ಗದವರು ಅಧಿಕಾರಕ್ಕೆ ಬಂದರೆ ಮುಂದುವರಿದವರು ದೌರ್ಜನ್ಯ ನಡೆಸುವಂತ ಕೆಲಸ ಮಾಡುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಸಿ ಪಾದಯಾತ್ರೆ ಮಾತನಾಡುತ್ತಿರುವುದು ಅಹಿಂದ ವರ್ಗದ ವಿರುದ್ದ ಮಾಡುತ್ತಿರುವ ಪಿತೂರಿ. ಹೀಗೆ ಮುಂದುವರಿದರೆ, ತುಮಕೂರು ಜಿಲ್ಲೆಯಲ್ಲಿ ಬೃಹತ್ ಹೋರಾಟ ಮಾಡುವ ಚಿಂತನೆ ಇದೆ. ಸುಳ್ಳನ್ನು ಸತ್ಯ ಎಂದು ನಿರೂಪಣೆ ಮಾಡುವುದೇ ಬಿಜೆಪಿ ಪಾದಯಾತ್ರೆಯ ಉದ್ದೇಶ” ಎಂದು ಆರೋಪಿಸಿದರು.

Advertisements

“ಮುಡಾದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ವಿರೋಧ ಪಕ್ಷದವರು ಬೆಂಗಳೂರಿನಲ್ಲಿದ್ದುಕೊಂಡು ಮಂಡ್ಯ, ಶ್ರೀರಂಗಪಟ್ಟಣ, ಮೈಸೂರಿನಲ್ಲಿ ವಾಸವಿದ್ದೇವೆ ಎಂದು ಸುಳ್ಳು ಹೇಳಿ ಮುಡಾದಿಂದ ನಿವೇಶನ ಪಡೆದಿದ್ದಾರೆ. ಪಡೆದಿರುವ ನಿವೇಶನಗಳನ್ನು ಮೊದಲು ಮೂಡಾಗೆ ಹಿಂದಿರುಗಿಸಿ ಮಾತನಾಡಲಿ” ಎಂದು ಸಚಿವ ರಾಜಣ್ಣ ಸವಾಲೆಸೆದರು.

“ಮುಡಾದಲ್ಲಿ ಹೆಚ್ಚಿನ ಫಲಾನುಭವಿಗಳು ವಿರೋಧ ಪಕ್ಷದಲ್ಲಿ ಇರುವವರೇ ಆಗಿದ್ದಾರೆ. ಬಿಜೆಪಿಯವರ ಮಾತು ‘ತಾನು ಕಳ್ಳ ಪರರ ನಂಬ’ ಎಂಬಂತಿದೆ. 17 ಮಾರ್ಚ್ 2011ರಂದು ವಿಧಾನ ಪರಿಷತ್‌ನಲ್ಲಿ ಯಡಿಯೂರಪ್ಪ‌ನವರು ಯಾರೆಲ್ಲ ನಿವೇಶನ ಖರೀದಿಸಿದ್ದಾರೆ, ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲವನ್ನೂ ವಿಧಾನ ಪರಿಷತ್ ನಡವಳಿಕೆಯಲ್ಲಿ ತಿಳಿಸಿದ್ದಾರೆ. ಮುಡಾದಲ್ಲಿ ಹೆಚ್ಚು ಜನ ಫಲಾನುಭವಿಗಳು ವಿರೋಧ ಪಕ್ಷದವರೆ ಆಗಿರುವುದು ಇದರಿಂದ ಬಹಿರಂಗವಾಗಿದೆ” ಎಂದರು.

“ಬಿಜೆಪಿ-ಜೆಡಿಎಸ್‌ನವರು ನಕಲಿ ಮಾಹಿತಿ‌ ನೀಡಿ ಮುಡಾ ನಿವೇಶನ ಖರಿದೀಸಿದ್ದಾರೆ. ಮೊದಲು ಅವರು ಖರೀದಿಸಿರುವ ಸೈಟುಗಳನ್ನು ವಾಪಸ್ ನೀಡಬೇಕು” ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ವೇಣುಗೋಪಾಲ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X