ಯುಪಿ ಕಾನೂನು ಕರ್ನಾಟಕದಲ್ಲೂ ಬರಲಿ; ಯೋಗಿ ಆಡಳಿತ ಮೆಚ್ಚಿ ಮಾತನಾಡಿದ ಸಚಿವ ರಾಜಣ್ಣ!

Date:

ಸಚಿವ ಕೆ ಎನ್ ರಾಜಣ್ಣ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಯುಪಿ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, “ನಮ್ಮಲಿಯೂ ಅಂತಹದ್ದೇ ಕಾನೂನು ಬರಬೇಕು” ಎಂದಿದ್ದಾರೆ.

- Advertisement -

ತುಮಕೂರಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, “ನಮ್ಮ ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಉತ್ತರ ಪ್ರದೇಶ ರೀತಿ ಕ್ರಮ ಅನಿವಾರ್ಯ. ಯಾರಾದರೂ ಪಾಕಿಸ್ತಾನಕ್ಕೆ ಬೆಂಬಲ ನೀಡಿದರೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಯುಪಿಯಲ್ಲಿ ಯಾವುದೇ ಪ್ರತ್ಯೇಕ ಕಾನೂನು ಇಲ್ಲ. ಅಲ್ಲಿ ಸಮಾಜಘಾತುಕರ ಮನೆ ಧ್ವಂಸ ಮಾಡಲಾಗುತ್ತದೆ. ಇದರಿಂದ ಅಲ್ಲಿಯ ಜನರು ಈಗ ಭಯಪಟ್ಟಿದ್ದು, ಹಿಡಿತಕ್ಕೆ ಬರುತ್ತಿದ್ದಾರೆ. ನಮ್ಮಲ್ಲಿಯೂ ಇಂತಹದ್ದೆ ಕ್ರಮ ಅಗತ್ಯ” ಎಂದು ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭೆ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, “ರಾಜ್ಯದಲ್ಲಿ ಕಾಂಗ್ರೆಸ್‌ 15-16 ಸೀಟು ಗೆಲ್ಲಬಹುದು. ಆದರೆ ಟಿಕೆಟ್ ನೀಡುವುದರ ಮೇಲೆ ಈ ಸಂಖ್ಯೆ ನಿರ್ಧಾರ ಆಗಲಿದೆ. ನಾನು ಉಸ್ತುವಾರಿ ಹೊಂದಿರುವ ಹಾಸನದಲ್ಲಿ ಶ್ರೇಯಸ್ ಪಟೇಲ್‌ಗೆ ಟಿಕೆಟ್ ಲಭಿಸಿದೆ. ನಾವು ಹಾಸನದಲ್ಲಿ ಖಂಡಿತವಾಗಿಯೂ ಗೆದ್ದೇ  ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ಆಕಾಂಕ್ಷಿಗಳಿಗಿರುವ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, “ಹಾಸನದಲ್ಲಿ ಪುಟ್ಟಸ್ವಾಮಿ ಗೌಡರಿಗೆ ಒಳ್ಳೆಯ ಹೆಸರಿದೆ. ಆದರೆ ಯಾವುದೇ ಚುನಾವಣೆ ಬಂದರೂ ಟಿಕೆಟ್ ಆಕಾಂಕ್ಷಿಗಳಿಗೆ ಅಸಮಾಧಾನ ಉಂಟಾಗವುದು ಸಾಮಾನ್ಯ. ಒಮ್ಮೆ ಸೀಟು ಘೋಷಣೆ ಮಾಡಿದ ಬಳಿಕ ಎಲ್ಲವೂ ಸರಿಯಾಗುತ್ತದೆ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಒಪ್ಪಲೇಬೇಕು” ಎಂದರು.

ಚುನಾವಣೆ ಬಂದಾಗಲೇ ದರ ಇಳಿಕೆ

ಮಹಿಳಾ ದಿನಾಚರಣೆಯಂದು ಕೇಂದ್ರ ಮೋದಿ ಸರ್ಕಾರ ಸಿಲಿಂಡರ್ ಬೆಲೆ ₹100 ಇಳಿಕೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ಚುನಾವಣೆ ಹತ್ತಿರ ಬಂದಿರುವ ಕಾರಣ ಮೋದಿ ಸರ್ಕಾರ ಎಲ್‌ಪಿಜಿ ದರ ಕಡಿತ ಮಾಡಿದೆ. ನೂರು ರೂಪಾಯಿ ಇಳಿಸಿ ಚುನಾವಣೆ ಮುಗಿದ ಬಳಿಕ ಅಧಿಕಾರಕ್ಕೆ ಬಂದರೆ ಮತ್ತೆ ಇನ್ನೂರು ರೂಪಾಯಿ ಹೆಚ್ಚಳ ಮಾಡುತ್ತಾರೆ” ಎಂದು ದೂರಿದರು.

“ಚುನಾವಣೆ ಬಂದಾಗಲೇ ದರ ಇಳಿಕೆ ಮಾಡಿ, ಬಳಿಕ ಬೆಲೆ ಹೆಚ್ಚಿಸುವುದು ಮೋದಿ ತಂತ್ರವಲ್ಲ, ಇದು ಆರ್‌ಎಸ್‌ಎಸ್‌ನ ಒಂದು ತಂತ್ರ. ಆರ್‌ಎಸ್‌ಎಸ್‌ ಏನೂ ಹೇಳುತ್ತದೆಯೋ ಅದನ್ನೇ ಬಿಜೆಪಿ ಮಾಡುತ್ತದೆ” ಎಂದು ವಾಗ್ದಾಳಿ ನಡೆಸಿದರು.

“ಜನರು ಸಿದ್ಧರಾಮಯ್ಯರ ಗ್ಯಾರಂಟಿ ಯೋಜನೆಯನ್ನು ಮರೆಯಲು ಸಾಧ್ಯವಿಲ್ಲ. ಇದರಿಂದಾಗಿ ಗೆಲುವು ಖಂಡಿತ. ನಮ್ಮ ಒಂದನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಬಿಜೆಪಿಯವರದ್ದು ಇನ್ನೂ ಪಟ್ಟಿಯೇ ಬಿಡುಗಡೆಯಾಗಿಲ್ಲ” ಎಂದು ಕುಟುಕಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು...

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ...

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...