GST ಅನ್ಯಾಯ | ‘ಬಹಿರಂಗ ಚರ್ಚೆಗೆ ನಾನು ಸಿದ್ದ’ ಎಂದ ಸಚಿವ ಕೃಷ್ಣಬೈರೇಗೌಡ; ನಿರ್ಮಲಾ ಸೀತಾರಾಮನ್‌ಗೂ ಆಹ್ವಾನ

Date:

Advertisements

“ಕೇಂದ್ರದಿಂದ ಜಿಎಸ್‌ಟಿ ಮೋಸದ ಬಗ್ಗೆ ಜನರೇ ಏರ್ಪಡಿಸಿರುವ ಬಹಿರಂಗ ಚರ್ಚೆಗೆ ನಾನು ಸಿದ್ದ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ದರಿದ್ದಾರ?”..ಹೀಗಂತ ಸವಾಲೆಸೆದಿರುವುದು ಕಂದಾಯ ಸಚಿವ ಕೃಷ್ಣಬೈರೇಗೌಡ.

ಈ ಬಗ್ಗೆ ಹೇಳಿಕೆ ನೀಡಿರುವ ಸಚಿವ ಕೃಷ್ಣಬೈರೇಗೌಡ, “ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಜಿಎಸ್‌ಟಿ ತೆರಿಗೆ ಹಂಚಿಕೆ ವಿಚಾರದಲ್ಲಂತೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಿರಂಗವಾಗಿಯೇ ಅನ್ಯಾಯ ಎಸಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹಣಕಾಸು ಆಯೋಗ 2020-21ನೇ ಸಾಲಿನ ಅಂತಿಮ ವರದಿಯಲ್ಲಿ ಕರ್ನಾಟಕಕ್ಕೆ ರೂ.5495 ಕೋಟಿ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ, 2021-26ನೇ ಸಾಲಿನ ವರದಿಯಲ್ಲೂ ರೂ.6,000 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಒಟ್ಟಾರೆ ಕೇಂದ್ರದಿಂದ ಕರ್ನಾಟಕಕ್ಕೆ ರೂ.11495 ಕೋಟಿ ಹಣ ವಿಶೇಷ ಅನುದಾನದ ರೂಪದಲ್ಲಿ ಬರಬೇಕಿದೆ” ಎಂದು ತಿಳಿಸಿದ್ದಾರೆ.

“ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗ ಅಂತಹದ್ದೊಂದು ಶಿಫಾರಸು ಮಾಡೇ ಇಲ್ಲ. ನಾವು ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ತಿದ್ದಲು ಹೋಗುವುದಿಲ್ಲ ಎಂದು ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಾ ರಾಜ್ಯಕ್ಕೆ ಅನ್ಯಾಯವೆಸಗುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisements

“ಒಂದೆಡೆ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಇದರಿಂದ ಜನರೂ ಸಹ ಗೊಂದಲಕ್ಕೀಡಾಗಿದ್ದಾರೆ. ತೆರಿಗೆ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ಹೇಳುತ್ತಿರುವುದು ನಿಜವೇ? ಅಥವಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳುತ್ತಿರುವುದು ನಿಜವೇ? ಎಂಬ ಗೊಂದಲ ಅವರನ್ನೂ ಕಾಡುತ್ತಿರುವುದು ಸುಳ್ಳಲ್ಲ” ಎಂದು ಸಚಿವ ಕೃಷ್ಣಬೈರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹೀಗಾಗಿ ಯಾವುದು ಸತ್ಯ? ಯಾವುದು ಸುಳ್ಳು? ಎಂದು ತಿಳಿದುಕೊಳ್ಳುವ ಸಲುವಾಗಿ ರಾಜ್ಯದ ಒಂದಷ್ಟು ಪ್ರಜ್ಞಾವಂತ ಜನ ಸಮೂಹ ಒಂದಾಗಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದಪಡಿಸಿದೆ. ಏಪ್ರಿಲ್ 06ರ ಶನಿವಾರ ಸಂಜೆ 05 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಕಂದಾಯ ಸಚಿವ ಹಾಗೂ ಜಿಎಸ್‌ಟಿ ಮಂಡಳಿ ಸದಸ್ಯನಾಗಿರುವ ನನ್ನನ್ನು ಹಾಗೂ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದೆ. ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲು ನಾನು ಈಗಾಗಲೇ ಒಪ್ಪಿಗೆ ಸೂಚಿಸಿದ್ದೇನೆ” ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

“ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನೂ ಅಲಂಕರಿಸಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಚರ್ಚೆಯಲ್ಲಿ ಪಾಲ್ಗೊಂಡು ಜಿಎಸ್‌ಟಿ ತೆರಿಗೆ ಹಂಚಿಕೆ ಕುರಿತು ರಾಜ್ಯದ ಜನ ಸಾಮಾನ್ಯರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಈ ಮೂಲಕ ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X