ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ

Date:

Advertisements
  • ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ
  • ಒಂದು ಗಂಟೆಗೂ ಅಧಿಕ ಕಾಲ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು

ಬೆಂಗಳೂರಿನ ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿರುವ ಸಚಿವ ಕೃಷ್ಣಭೈರೇಗೌಡ ಅವರು, ಸಬ್ ರಿಜಿಸ್ಟ್ರಾರ್ ಕಚೇರಿಗಳು ಎಷ್ಟರ ಮಟ್ಟಿಗೆ ದಕ್ಷತೆಯಿಂದ ಜನಸ್ನೇಹಿ ಸೇವೆ ನೀಡುತ್ತಿದೆ ಎಂದು ಪರಿಶೀಲನೆ ನಡೆಸಿದರು. ಅಲ್ಲದೆ, ಒಂದು ಗಂಟೆಗೂ ಅಧಿಕ ಕಾಲ ಜನರ ಸಮಸ್ಯೆಗಳನ್ನು ಆಲಿಸಿದರು.

ರಾಜ್ಯಾದ್ಯಂತ ಪ್ರತಿನಿತ್ಯ 10,000ಕ್ಕೂ ಅಧಿಕ ನೋಂದಣಿಗಳು ನಡೆಯುತ್ತಿವೆ. ಸುಲಭ ಮತ್ತು ಸರಳ ನೋಂದಣಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೂ, ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿರುವ ಕುರಿತು ದೂರುಗಳು ಬರುತ್ತಿವೆ. ಇದರಿಂದ ಜನರಿಗೂ ಬೇರೆ ಬೇರೆ ರೀತಿಯ ಸಮಸ್ಯೆಗಳಾಗುತ್ತಿದೆ.

ಹೀಗಾಗಿ ಮಂಗಳವಾರ ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡದ ಸಚಿವರು, ಅಲ್ಲಿನ ಕಚೇರಿ ಸಿಬ್ಬಂದಿಗಳು ಎಷ್ಟರ ಮಟ್ಟಿಗೆ ಜನಸ್ನೇಹಿ ಸೇವೆ ನೀಡುತ್ತಿದ್ದಾರೆ. ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆಗಳೇನು ಎಂದು ಅಧಿಕಾರಿಗಳಿಂದ ಮಾಹಿತಿ ಕೇಳಿ ಪಡೆದರು. ಅಲ್ಲದೆ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜನರಿಗೆ ಹೇಗೆ ಉತ್ತಮ ಸೇವೆ ನೀಡಬಹುದು ಎಂಬ ಕುರಿತು ಜನಸಾಮಾನ್ಯರಿಂದಲೇ ಅವರ ಸಮಸ್ಯೆಯನ್ನು ಸಲಹೆಯನ್ನು ಆಲಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಭ್ರಷ್ಟ ರಹಿತ ಜನಸೇವೆಗೆ ಕರೆ

ಸಬ್ ರಿಜಿಸ್ಟ್ರಾರ್ ಕಚೇರಿ ಪರಿಶೀಲನೆ ನಂತರ ಅಧಿಕಾರಿ/ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದ ಸಚಿವ ಕೃಷ್ಣಭೈರೇಗೌಡ ಅವರು, “ಕಂದಾಯ ಇಲಾಖೆಯಲ್ಲಿ ಆಡಳಿತ ಸುಧಾರಣೆ ಹಾಗೂ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನರ ಸುಲಿಗೆ ಮತ್ತು ವಿಳಂಬ ಧೋರಣೆಗೆ ತಡೆ ಒಡ್ಡಲಾಗುವುದು ಎಂದು ಜನಸಾಮಾನ್ಯರಿಗೆ ಈಗಾಗಲೇ ಭರವಸೆ ನೀಡಲಾಗಿದೆ. ಭರವಸೆಯಂತೆ ಅಧಿಕಾರಿಗಳು, ಸಿಬ್ಬಂದಿಗಳು ಜನರಿಗೆ ಸರಳ ಸುಲಭ ಸೇವೆ ನೀಡಬೇಕು. ಸುಲಿಗೆ ವಿಳಂಬ ಧೋರಣೆಗೆ ಅವಕಾಶ ನೀಡದೆ, ಭ್ರಷ್ಟಾಚಾರ ಮುಕ್ತ ಸೇವೆ ನೀಡಬೇಕು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X