ಬಿಜೆಪಿ ಛಿದ್ರವಾಗಿದೆ, ಜೋಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್ ಲೇವಡಿ

Date:

Advertisements
  • ‘ಬಿಜೆಪಿಯಲ್ಲಿ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ’
  • ‘ಬಿಜೆಪಿಯವರನ್ನು ಚುನಾವಣೆಯಲ್ಲಿ ರಾಜ್ಯದ ಜನ ತಿರಸ್ಕರಿಸಿದ್ದಾರೆ’

ಬಸವರಾಜ ಬೊಮ್ಮಾಯಿ ಅವರು ಖಾಲಿ ಕುರ್ಚಿಯಲ್ಲಿ ಕೂತಿದ್ದಾರೆ. ಬಿಜೆಪಿ ಛಿದ್ರವಾಗಿದೆ. ಒಂದಲ್ಲ, ಎರಡಲ್ಲ, ಬಿಜೆಪಿಯೊಳಗೆ ಬರೋಬ್ಬರಿ ಇಪ್ಪತ್ತು ಗುಂಪುಗಳು ಹುಟ್ಟಿಕೊಂಡಿವೆ. ಬಿಜೆಪಿಯನ್ನು ಜೋಡಿಸಲು ಯಾರಿಂದಲೂ ಸಾಧ್ಯವಿಲ್ಲ, ಅಷ್ಟು ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಬಿಜೆಪಿ ನಾಯಕರಲ್ಲಿ ಆಂತರಿಕ ಕಚ್ಚಾಟ ಶುರುವಾಗಿದೆ. ಸ್ವಪಕ್ಷದ ನಾಯಕರ ವಿರುದ್ದವೇ ಬಿಜೆಪಿ ನಾಯಕರು ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ” ಎಂದರು.

“ಬಿಜಾಪುರದಲ್ಲಿ ಒಬ್ಬೊಬ್ಬರದ್ದು ಒಂದೊಂದು ರೀತಿ ಹೊಡೆದಾಟ ಆಗುತ್ತಿದೆ. ಬಿಜೆಪಿ ಅಂತಿಮ ಘಟ್ಟ ತಲುಪಿದೆ. ಬಿಜೆಪಿಗೆ ಫೆವಿಕಲ್ ಹಚ್ಚಿದ್ರೂ ಅದು ಅಂಟಲ್ಲ” ಎಂದು ಲೇವಡಿ ಮಾಡಿದರು.

Advertisements

ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ

“ಬಿಜೆಪಿಯವರನ್ನು ರಾಜ್ಯದ ಜನ ತಿರಸ್ಕರಿಸಿದ್ದಾರೆ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. 40% ಕಮಿಷನ್ ಹೊಡೆಯೋದು ಬಿಟ್ಟು ಬೇರೇನೂ ಇವರು ಮಾಡಿಲ್ಲ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಅಂದರೆ ಉದ್ಯಮಿಗಳು, ಐಟಿ ಬಿಟಿ ಶ್ರೀಮಂತರಷ್ಟೇ ಅಲ್ಲ!

“ಅಕ್ಕಿ ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಅದಕ್ಕೆ ಅಕ್ಕಿ ಬದಲು ಹಣ ನೀಡುತ್ತೇವೆ. ಇದೇ ಸಿ.ಟಿ ರವಿ ಅಕ್ಕಿ ಇಲ್ಲ ಅಂದ್ರೆ ಹಣ ಕೊಡಿ ಎಂದು ಹೇಳಿದರು. ಈಗ ನಾವು ಹಣವನ್ನೇ ಕೊಡ್ತಿದ್ದೀವಿ” ಎಂದರು.

ಕಾಸಿಗಾಗಿ ವರ್ಗಾವಣೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ನಮ್ಮ ಸರ್ಕಾರದಲ್ಲಿ ಕಾಸಿಗಾಗಿ ವರ್ಗಾವಣೆ ನಡೆದಿಲ್ಲ. ಪಾರದರ್ಶಕವಾಗಿ ನಡೆಯುತ್ತಿದೆ. ಟೆಂಡರ್ ಕೂಡ ನಾವು ಇನ್ನೂ ಕರೆದಿಲ್ಲ. ಕುಮಾರಸ್ವಾಮಿ ಬಹಳ ಆತುರರಾಗಿದ್ದಾರೆ” ಎಂದರು.

“ಯತೀಂದ್ರ ಹೆಸರು ಯಾಕೆ ತರ್ತೀರಿ. ಯತೀಂದ್ರ ಎಂಎಲ್ ಎ ಆಗಿದ್ದಾರಾ? ಎಂಎಲ್‌ಎಗಳು ಹೋದಾಗ ಶಿಫಾರಸ್ಸು ಪತ್ರ ಕೊಟ್ಟಿರುತ್ತಾರೆ. ಅದಕ್ಕೆ ಹಣ ಲೇಪ ಕೊಡೋದು ಸರಿಯಲ್ಲ, ಕುಮಾರಸ್ವಾಮಿ ಎರಡೆರಡು ಲೆಟರ್ ಕೊಟ್ಟಿರಲಿಲ್ವಾ” ಎಂದರು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X