ಕಲಾತಂಡದೊಂದಿಗೆ ಕಚೇರಿ ಪೂಜೆ ನೆರವೇರಿಸಿ ಗಮನ ಸೆಳೆದ ಸಚಿವ ಶಿವರಾಜ್ ತಂಗಡಗಿ

Date:

  • ಕೊಠಡಿ ಪೂಜೆಯಲ್ಲಿ ವಿಭಿನ್ನತೆ ಮೆರೆದ ಕನ್ನಡ ಸಂಸ್ಕೃತಿ ಇಲಾಖೆ ಸಚಿವ
  • ಹಾರ, ತುರಾಯಿ ಬದಲು ಪುಸ್ತಕ ಉಡುಗೊರೆ ಕೊಡುವಂತೆ ತಿಳಿಸಿದ ಸಚಿವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಇಂದು ತಮ್ಮ ವಿಧಾನಸೌಧ ಕಚೇರಿ ಪೂಜೆಯನ್ನು ವಿಭಿನ್ನವಾಗಿ ಆಚರಿಸಿ ಗಮನ ಸೆಳೆದರು.

ಬುಧವಾರ ವಿಧಾನಸೌಧದ ತಮ್ಮ ಕೊಠಡಿ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಅವರು, ಸಾಂಸ್ಕೃತಿಕ ಕಲಾತಂಡದ ಜೊತೆ ಕೊಠಡಿ ಪ್ರವೇಶಿಸಿ, ಇಲಾಖೆ ವಿಚಾರದಲ್ಲಿನ ತಮ್ಮ ಬದ್ದತೆ ಹಾಗೂ ಕಾಳಜಿ ಮೆರೆದಿದ್ದಾರೆ.

ಬಳಿಕ ಇದೇ ತಂಡಗಳೊಡಗೂಡಿ ಸಾಂಪ್ರದಾಯಿಕ ಸಂಪ್ರದಾಯದಂತೆ ದೇವರ ಪೂಜೆ ನೆರವೇರಿಸಿ ಕಚೇರಿ ಕಾರ್ಯಾಚರಣೆಯನ್ನು ಅಧಿಕೃತಗೊಳಿಸಿದರು.

ವಿಭಿನ್ನ ಪೂಜಾಕಾರ್ಯಕ್ರಮಕ್ಕೆ ಚಿತ್ರದುರ್ಗದ ಭೋವಿ ಪೀಠದ ಪೀಠಾಧ್ಯಕ್ಷರಾದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿ ಹಾಗೂ ಸಚಿವರ ಕುಟುಂಬವರ್ಗ ಮತ್ತು ಕೆಲಸಚಿವರು, ಅಧಿಕಾರಿಗಳು ಸಾಕ್ಷಿಯಾದರು.

ಈ ಸುದ್ದಿ ಓದಿದ್ದೀರಾ?:ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

ಇನ್ನು ತಮ್ಮ ಭೇಟಿಗೆ ಬಂದವರೆಲ್ಲರಿಗೂ ಸಚಿವ ತಂಗಡಗಿ, ಪುಷ್ಪಗುಚ್ಚ ಹಾರ ಸ್ಮರಣಿಕೆ ಇತ್ಯಾದಿಗಳ ಬದಲು ಕೇವಲ ಪುಸ್ತಕಗಳನ್ನೇ ಉಡುಗೊರೆಯಾಗಿ ನೀಡಬೇಕೆಂದು ಮನವಿ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...