ಕಲಾತಂಡದೊಂದಿಗೆ ಕಚೇರಿ ಪೂಜೆ ನೆರವೇರಿಸಿ ಗಮನ ಸೆಳೆದ ಸಚಿವ ಶಿವರಾಜ್ ತಂಗಡಗಿ

Date:

  • ಕೊಠಡಿ ಪೂಜೆಯಲ್ಲಿ ವಿಭಿನ್ನತೆ ಮೆರೆದ ಕನ್ನಡ ಸಂಸ್ಕೃತಿ ಇಲಾಖೆ ಸಚಿವ
  • ಹಾರ, ತುರಾಯಿ ಬದಲು ಪುಸ್ತಕ ಉಡುಗೊರೆ ಕೊಡುವಂತೆ ತಿಳಿಸಿದ ಸಚಿವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಇಂದು ತಮ್ಮ ವಿಧಾನಸೌಧ ಕಚೇರಿ ಪೂಜೆಯನ್ನು ವಿಭಿನ್ನವಾಗಿ ಆಚರಿಸಿ ಗಮನ ಸೆಳೆದರು.

ಬುಧವಾರ ವಿಧಾನಸೌಧದ ತಮ್ಮ ಕೊಠಡಿ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಅವರು, ಸಾಂಸ್ಕೃತಿಕ ಕಲಾತಂಡದ ಜೊತೆ ಕೊಠಡಿ ಪ್ರವೇಶಿಸಿ, ಇಲಾಖೆ ವಿಚಾರದಲ್ಲಿನ ತಮ್ಮ ಬದ್ದತೆ ಹಾಗೂ ಕಾಳಜಿ ಮೆರೆದಿದ್ದಾರೆ.

ಬಳಿಕ ಇದೇ ತಂಡಗಳೊಡಗೂಡಿ ಸಾಂಪ್ರದಾಯಿಕ ಸಂಪ್ರದಾಯದಂತೆ ದೇವರ ಪೂಜೆ ನೆರವೇರಿಸಿ ಕಚೇರಿ ಕಾರ್ಯಾಚರಣೆಯನ್ನು ಅಧಿಕೃತಗೊಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಭಿನ್ನ ಪೂಜಾಕಾರ್ಯಕ್ರಮಕ್ಕೆ ಚಿತ್ರದುರ್ಗದ ಭೋವಿ ಪೀಠದ ಪೀಠಾಧ್ಯಕ್ಷರಾದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿ ಹಾಗೂ ಸಚಿವರ ಕುಟುಂಬವರ್ಗ ಮತ್ತು ಕೆಲಸಚಿವರು, ಅಧಿಕಾರಿಗಳು ಸಾಕ್ಷಿಯಾದರು.

ಈ ಸುದ್ದಿ ಓದಿದ್ದೀರಾ?:ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

ಇನ್ನು ತಮ್ಮ ಭೇಟಿಗೆ ಬಂದವರೆಲ್ಲರಿಗೂ ಸಚಿವ ತಂಗಡಗಿ, ಪುಷ್ಪಗುಚ್ಚ ಹಾರ ಸ್ಮರಣಿಕೆ ಇತ್ಯಾದಿಗಳ ಬದಲು ಕೇವಲ ಪುಸ್ತಕಗಳನ್ನೇ ಉಡುಗೊರೆಯಾಗಿ ನೀಡಬೇಕೆಂದು ಮನವಿ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...