ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ಆಕ್ರೋಶ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನ ಬಜೆಟ್ ಮಂಡನೆಯ ಸಿದ್ಧತೆಗಳಲ್ಲಿ ತೊಡಗಿದ್ದು, ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಮಂಗಳವಾರ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳಳೊಂದಿಗೆ ಬಜೆಟ್ ಸಭೆಗಳು ನಿಗದಿಯಾಗಿದೆ.

ವಿಪರ್ಯಾಸವೆಂದರೆ ಅಲ್ಪಸಂಖ್ಯಾತ ಸಮುದಾಯ ಸಾಮಾಜಿಕ ಮುಖಂಡರು, ಸಂಘ-ಸಂಸ್ಥೆಗಳ ಮುಖಂಡರನ್ನು ಈ ಬಜೆಟ್ ಪೂರ್ವಭಾವಿ ಸಭೆಯಿಂದ ಹೊರಗಿಡಲಾಗಿದೆ. ಸರ್ಕಾರದ ಈ ನಡೆಗೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ದಲಿತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರನ್ನು ಬಜೆಟ್ ಪೂರ್ವಭಾವಿ ಸಭೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಸಂಜೆ 4 ಗಂಟೆಗೆ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಸಂಘ- ಸಂಸ್ಥೆಗಳ ಸಭೆ ಕರೆಯಲಾಗಿದೆ. ಸಂಜೆ 6 ಗಂಟೆಗೆ ಅಲ್ಪಸಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸಭೆ ಇದ್ದು, ಅದರಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು ಮತ್ತು ಶಾಸಕರನ್ನು ಮಾತ್ರ ಆಹ್ವಾನಿಸಲಾಗಿದೆ.

Advertisements
CM PROGRAMME
ಮುಖ್ಯಮಂತ್ರಿಗಳ ಮಂಗಳವಾರದ ಕಾರ್ಯಕಲಾಪ

ಇದು ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಹಾಗೂ ಸಂಘ-ಸಂಸ್ಥೆಗಳ ಸ್ಪಷ್ಟ ಕಡೆಗಣನೆಯಾಗಿದೆ. ಸಮುದಾಯದ ಮುಖಂಡರು ಹಾಗೂ ಸಂಘಸಂಸ್ಥೆಗಳನ್ನು ಹೊರಗಿಟ್ಟು ನಡೆಸುವ ಈ ಸಭೆ ಕೇವಲ ಕಾಟಾಚಾರದ ಸಭೆ ಆಗಲಿದೆ. ಸಮುದಾಯದ ಬೇಕು-ಬೇಡಗಳ ಕುರಿತು ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಅಭಿಪ್ರಾಯ, ಅಹವಾಲುಗಳನ್ನು ಕೇಳಬೇಕಾಗಿರುವುದು ಮುಖ್ಯಮಂತ್ರಿಯವರ ಆದ್ಯ ಕರ್ತವ್ಯ, ಉಳಿದೆಲ್ಲ ಸಮುದಾಯಗಳ ಮುಖಂಡರು, ಸಂಘ-ಸಂಸ್ಥೆಗಳನ್ನು ಆಹ್ವಾನಿಸಿ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳನ್ನು ಕೈಬಿಟ್ಟಿರುವುದು ಸಮಾಜವಾದ, ಸಮಾನತೆಯ ಸಿದ್ದಾಂತದ ಪ್ರಬಲ ಪ್ರತಿಪಾದಕರಾಗಿರುವ ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಕಾಲ ಮಿಂಚಿಲ್ಲ ಸಭೆ ಸಂಜೆ ಇರುವುದರಿಂದ ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಂಘದ ಮುಖಂಡ ನಸೀಮ್ ಅಹ್ಮದ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ‌ – ಪರಮೇಶ್ವ‌ರ್‌ಗೆ ನಿಂದನೆ ಆರೋಪ, ಪದ್ಮನಾಭ ಅಲಿಯಾಸ್‌ ಪದ್ದು ವಿರುದ್ಧ ಎಫ್‌ಐಆರ್

ಇಲ್ಲದಿದ್ದರೆ ಬಜೆಟ್ ಪೂರ್ವಭಾವಿ ಸಭೆಗಳಿಗೆ ವಿವಿಧ ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳಿಗೆ ಆಹ್ವಾನಿಸುವ ಅರ್ಹತೆ ಅಥವಾ ಮಾನದಂಡಗಳೇನು ಎಂಬುದನ್ನು ಸಿಎಂ ಕಚೇರಿ ಸ್ಪಷ್ಟಪಡಿಸಬೇಕು. ಸಮುದಾಯದ ಮುಖಂಡರು ಹಾಗೂ ಸಂಘ-ಸಂಸ್ಥೆಗಳನ್ನು ಹೊರಗಿಟ್ಟು ನಡೆಸಲಾಗುತ್ತಿರುವ ಈ ಸಭೆಯನ್ನು ಸಮುದಾಯದ ಸಚಿವರು, ಶಾಸಕರು‌ ಬಹಿಷ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಂಘ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X