ಸಿಗದ ಸಚಿವ ಸ್ಥಾನ: ಮೋದಿ ನೇತೃತ್ವದ ಮೊದಲ ಮೈತ್ರಿ ಸರ್ಕಾರದಲ್ಲಿ ಅಜಿತ್ ಪವಾರ್ ಬಣಕ್ಕೆ ಹಿನ್ನಡೆ

Date:

Advertisements

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದೆ. ಇಂದು(ಜೂನ್ 9)ರ ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಈ ನಡುವೆ ಸಚಿವ ಸ್ಥಾನಕ್ಕೆ ಮೈತ್ರಿಕೂಟದ ಪಕ್ಷಗಳಲ್ಲಿ ಲಾಭಿ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಬಣಕ್ಕೆ ಕೊನೆಯ ಕ್ಷಣದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಕೈ ತಪ್ಪಿದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್, “ಎನ್‌ಸಿಪಿಯ ಪ್ರಫುಲ್ ಪಟೇಲ್ ಅವರು ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಸಚಿವರ ಆಫರ್ ಬಂದಿತ್ತಾದರೂ ಅದನ್ನು ವಹಿಸಿಕೊಳ್ಳುವುದು ನಮಗೆ ಸರಿ ಕಂಡಿಲ್ಲ. ಹಾಗಾಗಿ, ನಮಗೆ ಕ್ಯಾಬಿನೆಟ್ ಮಂತ್ರಿಗಿರಿ ಬೇಕು. ಇದನ್ನು ಸ್ಪಷ್ಟವಾಗಿ ಬಿಜೆಪಿಯವರಿಗೆ ತಿಳಿಸಿದ್ದೇವೆ” ಎಂದು ಹೇಳಿದ್ದಾರೆ.

Advertisements

“ಕೆಲವು ದಿನ ಕಾಯುತ್ತೇವೆ ಎಂದು ನಾವು ಅವರಿಗೆ (ಬಿಜೆಪಿ) ತಿಳಿಸಿದ್ದೇವೆ. ಆದರೆ ನಮಗೆ ಕ್ಯಾಬಿನೆಟ್ ಮಂತ್ರಿಗಿರಿ ಬೇಕು. ನಾವು ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇವೆ. ನಮಗೆ ಇಂದು ಒಬ್ಬ ಲೋಕಸಭೆ ಮತ್ತು ಒಬ್ಬ ರಾಜ್ಯಸಭಾ ಸಂಸದರಿದ್ದಾರೆ. ಆದರೆ ಮುಂದಿನ ಎರಡು ಮೂರು ತಿಂಗಳಲ್ಲಿ ನಾವು ರಾಜ್ಯಸಭೆಯಲ್ಲಿ ಒಟ್ಟು 3 ಸದಸ್ಯರನ್ನು ಹೊಂದಿಲಿದ್ದೇವೆ ಮತ್ತು ಸಂಸತ್ತಿನಲ್ಲಿ ನಮ್ಮ ಸಂಸದರ ಸಂಖ್ಯೆ 4 ಆಗಿರಲಿತ್ತದೆ. ಹಾಗಾಗಿ ನಮಗೆ ಒಂದು ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ನೀಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ” ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಇದೇ ವಿಚಾರವಾಗಿ ಮಾತನಾಡಿರುವ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ “ನಮ್ಮ ಪಕ್ಷಕ್ಕೆ ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವ ಸ್ಥಾನ ಸಿಗಲಿದೆ ಎಂದು ನಿನ್ನೆ ರಾತ್ರಿ ನಮಗೆ ತಿಳಿಸಲಾಗಿತ್ತು. ನಾನು ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ. ಆದ್ದರಿಂದ ಇದು ನನಗೆ ಸ್ವಲ್ಪ ಹಿನ್ನಡೆಯಾಗಿದೆ. ನಾವು ಬಿಜೆಪಿ ನಾಯಕತ್ವಕ್ಕೆ ತಿಳಿಸಿದ್ದೇವೆ ಮತ್ತು ಅವರು ಈಗಾಗಲೇ ನಮಗೆ ಕೆಲವು ದಿನ ಕಾಯುವಂತೆ ಹೇಳಿದ್ದಾರೆ. ಇದು ಮೈತ್ರಿ ಸರ್ಕಾರವಾಗಿರುವುದರಿಂದ ಅವರು ಸೂಕ್ತ ನಿರ್ಧಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ” ಎಂದು ಹೇಳಿಕೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X