ಅದಾನಿ-ಅಂಬಾನಿ ಬಳಿ ಕಪ್ಪು ಹಣ ಇದೆ ಅಂತ ಕೊನೆಗೂ ಮೋದಿ ಒಪ್ಪಿದ್ರು: ಅಶೋಕ್ ಗೆಹ್ಲೋಟ್

Date:

Advertisements

ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು.

ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು ಹೇಳುವುದಿಲ್ಲ. ಅವರಿಂದ ಹಣ ಬಂದಿರಬಹುದು ಎಂದು ಪ್ರಧಾನಿ ಮೋದಿ ತನ್ನ ಚುನಾವಣಾ ಪ್ರಚಾರದಲ್ಲಿ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಶೋಕ್ ಗೆಹ್ಲೋಟ್, “ತಮ್ಮ ಹೇಳಿಕೆ ಮೂಲಕ ಅದಾನಿ-ಅಂಬಾನಿ ಕಪ್ಪುಹಣ ಸಂಗ್ರಹಿಸಿದ್ದಾರೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಚುನಾವಣೆ ಘೋಷಣೆಯಾದ ಬಳಿಕ ಈ ಜನರು (ಕಾಂಗ್ರೆಸ್ ನಾಯಕರು) ಅದಾನಿ-ಅಂಬಾನಿಯನ್ನು ನಿಂದನೆ ಮಾಡುವುದನ್ನು ನಿಲ್ಲಿಸಿದ್ದಾರೆ. ಶೆಹಜಾದಾ (ರಾಹುಲ್ ಗಾಂಧಿಯ ಬಗ್ಗೆ ಮೋದಿ ವ್ಯಂಗ್ಯ) ಅಂಬಾನಿ ಅದಾನಿಯಿಂದ ಎಷ್ಟು ಹಣ ಪಡೆದಿದ್ದಾರೆ ಎಂದು ಬಹಿರಂಗಪಡಿಸಲಿ. ಕಾಂಗ್ರೆಸ್‌ಗೆ ಟೆಂಪೋಗಳಲ್ಲಿ ನೋಟುಗಳು (ಹಣ) ಬಂದಿದೆಯೇ? ರಾತ್ರೋರಾತ್ರಿ ಅಂಬಾನಿ-ಅದಾನಿ ನಿಂದನೆ ನಿಲ್ಲಬೇಕಾದರೆ ಯಾವ ಡೀಲ್ ನಡೆದಿದೆ” ಎಂದು ಪ್ರಶ್ನಿಸಿದ್ದರು.

Advertisements

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಶೆಹಜಾದಾ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, “ಅದಾನಿ-ಅಂಬಾನಿ ಬಳಿ ಅಪಾರ ಪ್ರಮಾಣದ ಕಪ್ಪುಹಣವಿದೆ ಎಂದು ಪ್ರಧಾನಿ ಕೊನೆಗೂ ಹತ್ತು ವರ್ಷದ ಬಳಿಕ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಈಗ, ಮೋದಿ ಅವರು ಇದಕ್ಕೂ ಮೊದಲು ಯಾರ ಸ್ಥಳದಲ್ಲಿ ಕರೆನ್ಸಿ ನೋಟುಗಳಿಂದ ತುಂಬಿದ ಗೋಣಿಚೀಲಗಳು ಮತ್ತು ಟೆಂಪೋಗಳನ್ನು ಖಾಲಿ ಮಾಡಲಾಯಿತು ಅಂತ ಹೇಳಬೇಕಾಗುತ್ತದೆ” ಎಂದು ಕುಟುಕಿದರು.

ಹಾಗೆಯೇ, “ರಾಹುಲ್ ಗಾಂಧಿ ಬಹಳ ಸಮಯದಿಂದ ಸತ್ಯಕ್ಕಾಗಿ ಹೋರಾಡುತ್ತಿದ್ದಾರೆ. ಅಂತಿಮ ಗೆಲುವು ಸತ್ಯ, ಜೂನ್ 4 ರಂದು ನ್ಯಾಯ ಮತ್ತು ಸತ್ಯಕ್ಕೆ ಜಯ ಸಿಗುತ್ತದೆ” ಎಂದು ಭರವಸೆ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ತಿರುಗೇಟು

ಇನ್ನು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಮೋದಿ ಅವರೇ ಕೊಂಚ ಭಯಪಟ್ಟಿದ್ದೀರಾ? ಸಾಮಾನ್ಯವಾಗಿ ನೀವು ಮುಚ್ಚಿನ ಕೋಣೆಯಲ್ಲಿ ಕೂತು ಅದಾನಿ ಅಂಬಾನಿ ಬಗ್ಗೆ ಮಾತನಾಡುತ್ತೀರಿ. ಮೊದಲ ಬಾರಿಗೆ ನೀವು ಸಾರ್ವಜನಿಕವಾಗಿ ಅದಾನಿ ಅಂಬಾನಿ ಎಂದಿದ್ದೀರಿ. ಟೆಂಪೋದಲ್ಲಿ ಹಣ ನೀಡುತ್ತಾರೆ ಎಂದು ನಿಮಗೆ ತಿಳಿದಿದೆಯಲ್ವ, ಇದು ನಿಮ್ಮ ವೈಯಕ್ತಿಕ ಅನುಭವವೇ” ಎಂದು ಪ್ರಧಾನಿ ಕಾಳೆದಿದ್ದಾರೆ.

“ಸಿಬಿಐ, ಇಡಿಯನ್ನು ಕಳುಹಿಸಿ. ಎಲ್ಲ ವಿಚಾರಣೆಯನ್ನು ಮಾಡಿಸಿ. ಹೆದರಬೇಡಿ ಮೋದಿ ಜಿ” ಎಂದು ವ್ಯಂಗ್ಯವಾಡಿದ ರಾಹುಲ್ ಗಾಂಧಿ ಅವರು, “ಪ್ರಧಾನಿ ಮೋದಿ ಅವರು ಇವರಿಗೆ (ಅದಾನಿ ಅಂಬಾನಿ) ಎಷ್ಟು ಹಣವನ್ನು ನೀಡಿದ್ದಾರೋ ಅಷ್ಟು ಹಣವನ್ನು ನಾವು ದೇಶದ ಬಡವರಿಗೆ ನೀಡುತ್ತೇವೆ” ಎಂದು ಪುನರುಚ್ಛರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X