ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಬಿಜೆಪಿಯಿಂದ ವೆಚ್ಚ ವಸೂಲಿಗೆ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿದ ಕಾಂಗ್ರೆಸ್‌

Date:

Advertisements

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಧ್ಯಾನಕ್ಕೆ ತೆರಳಿದ್ದಾರೆ. ಅವರ ಧ್ಯಾನಕ್ಕಾಗಿ ಮಾಡಲಾದ ಎಲ್ಲ ಏರ್ಪಾಡುಗಳಿಗೆ ತಗುಲುವ ವೆಚ್ಚವನ್ನು ಬಿಜೆಪಿಯಿಂದ ವಸೂಲಿ ಮಾಡಲು ಮದ್ರಾಸ್ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿ ಕಾಂಗ್ರೆಸ್‌ ಅರ್ಜಿ ಸಲ್ಲಿಸಿದೆ.

ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಸದಸ್ಯ ಎ.ಪಿ ಸೂರ್ಯಪ್ರಕಾಶ್ ನೇತೃತ್ವದ ವಕೀಲರ ತಂಡವು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕಕ್ಕೆ ವೈಯಕ್ತಿಕ ಭೇಟಿಗಾಗಿ ಬಂದಿದ್ದಾರೆ. ಭದ್ರತಾ ಅಂಶಗಳನ್ನು ಮರೆತು, ಮೋದಿಯವರ ಕನ್ನಿಕುಮಾರಿ ಭೇಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭಾರಿ ಮೊತ್ತವನ್ನು ಖರ್ಚು ಮಾಡಿದೆ. ಆ ವೆಚ್ಚವನ್ನು ಬಿಜೆಪಿಯ ನಿಧಿಯಿಂದ ವಸೂಲಿ ಮಾಡಬೇಕಾಗಿದೆ” ಎಂದು ಸೂರ್ಯಪ್ರಕಾಶ್ ಹೇಳಿದ್ದಾರೆ.

“ಮೋದಿ ಅವರ ಧ್ಯಾನವು ಚುನಾವಣಾ ಪ್ರಚಾರದ ಭಾಗವಾಗಿದೆ. ಅವರು ಬಿಜೆಪಿಗೆ ಮತ ಸೆಳೆಯಲು ವಿವೇಕಾನಂದ ರಾಕ್‌ನಲ್ಲಿ ಮಾರುವೇಷ ಧರಿಸಿದ್ದಾರೆ. ಮೇ 30ರಂದು ಪ್ರಾರಂಭವಾದ ಮೋದಿಯವರ ಧ್ಯಾನವನ್ನು ದೂರದರ್ಶನ ಸೇರಿದಂತೆ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ. ಇದು, ವಿಪಕ್ಷಗಳಿಗೆ ಅನನುಕೂಲಕರವಾಗಿದೆ” ಎಂದು ಅವರು ಹೇಳಿದ್ದಾರೆ.

Advertisements

“ಅವರ ಕನ್ಯಾಕುಮಾರಿ ಭೇಟಿಗಾಗಿ ತಮಿಳುನಾಡು ರಾಜ್ಯ ಸರ್ಕಾರ ಖರ್ಚು ಮಾಡಿರುವ ಎಲ್ಲ ಹಣವನ್ನು ರಾಜ್ಯ ಸರ್ಕಾರವು ಬಿಜೆಪಿ ನಿಧಿಯಿಂದ ವಸೂಲಿ ಮಾಡುವಂತೆ ಹೈಕೋರ್ಟ್‌ ನಿರ್ದೇಶನ ನೀಡಬೇಕು. ಅದಕ್ಕಾಗಿ, ಮಧ್ಯಸ್ಥಿಕೆ ವಹಿಸಬೇಕು” ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X