ಮೋದಿ ಪ್ರತಿ ವಿದೇಶಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ; ಇದು ಮೋಜಲ್ಲವೇ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Date:

Advertisements

ಹಸಿವಿನ ಸೂಚ್ಯಂಕದಲ್ಲಿ ಭಾರತ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ಜಮೀರ್‌ ಅಹಮದ್‌ ಖಾನ್‌ ಜೊತೆಗಿನ ವಿಮಾನ ಪ್ರಯಾಣ ವಿಚಾರವಾಗಿ ಟೀಕಿಸಿರುವ ಬಿಜೆಪಿಗೆ ಸಾಮಾಜಿಕ ಜಾಲತಾಣದಲ್ಲೇ ತಿರುಗೇಟು ನೀಡಿರುವ ಅವರು, “ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

“ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ” ಎಂದು ಹರಿಹಾಯ್ದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X