ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

Date:

Advertisements
  • ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಪಟ್ಟಿ ಮಾಡಲಿರುವ ಎಸಿಜೆ ದೇಸಾಯಿ
  • ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಕೀಲರ ಮನವಿ

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ, ಯಾವುದೇ ಕಾರಣ ನೀಡದೆ ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷಯ ತೀರ್ಪನ್ನು ಪ್ರಶ್ನಿಸಿ ರಾಹುಲ್ ಸೂರತ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಮನವಿ ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಹುಲ್ ಪರ ವಕೀಲ ಪಂಕಜ್ ಚಂಪನೇರಿ ಅವರು ಏಪ್ರಿಲ್ 29ರಂದು ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಯಾವುದೇ ಕಾರಣ ನೀಡದ ನ್ಯಾಯಾಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

Advertisements

ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಬಳಿಕ, ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಹಂಗಾಮಿ ನ್ಯಾಯಾಮೂರ್ತಿ ಎ.ಜೆ ದೇಸಾಯಿ ಅವರ ಮುಂದೆ ರಾಹುಲ್ ಅವರ ವಕೀಲ ಪಂಕಜ್ ಚಂಪನೇರಿ ಪ್ರಸ್ತಾಪಿಸಿದ್ದಾರೆ. ಎಸಿಜೆ ದೇಸಾಯಿ ಅವರು ವಿಚಾರಣಾ ದಿನಾಂಕವನ್ನು ಪಟ್ಟಿ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿರುವ ಗೀತಾ ಗೋಪಿ ಅವರು ಪ್ರಕರಣವನ್ನು ಬೇರೆ ಪೀಠಕ್ಕೆ ನಿಯೋಜಿಸಲು ಮುಖ್ಯ ನ್ಯಾಯಮೂರ್ತಿಗೆ ಹಸ್ತಾಂತರಿಸುವಂತೆ ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಸತ್ಯ ಹೇಳಿದ್ದಕ್ಕೆ ಸಿಕ್ಕ ಬೆಲೆ; ತುಘಲಕ್ ಲೇನ್ ನಿವಾಸ ತೊರೆದ ರಾಹುಲ್ ಗಾಂಧಿ

ಏನಿದು ಪ್ರಕರಣ?

2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ “ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ” ಎಂದು ರಾಹುಲ್‌ ಲೇವಡಿ ಮಾಡಿದ್ದರು.

ಈ ಹೇಳಿಕೆಯನ್ನು ಖಂಡಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಅಪರಾಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X