ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ

Date:

Advertisements

ಮೋದಿ ಗ್ಯಾರಂಟಿಯನ್ನು ಲೇವಡಿ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ‘ಮೋದಿ ಗ್ಯಾರಂಟಿ’ ಎಂದು ತಿರುಗೇಟು ನೀಡಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಗ್ಯಾರಂಟಿ’ ಬಗ್ಗೆ ತನ್ನ ಹೆಚ್ಚಿನ ಭಾಷಣಗಳಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಉತ್ತರ ಬಂಗಾಳದ ಜಲಪೈಗುರಿಯಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದಾಗಲೂ ಪ್ರಧಾನಿ ಮೋದಿ ಈ ಗ್ಯಾರಂಟಿಗಳ ಪ್ರಸ್ತಾಪ ಮಾಡಿದ್ದರು. ಇದಾದ ಒಂದು ದಿನದ ಬಳಿಕ ಬಂಕೂರಾದಲ್ಲಿ ನಡೆದ ಪ್ರಚಾರ ಕಾರ್ಯದ ವೇಳೆ ಮೋದಿಗೆ ಬ್ಯಾನರ್ಜಿ ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ?   ಮೋದಿಯ ಭ್ರಷ್ಟಾಚಾರ ಗ್ಯಾರಂಟಿ; ಬಿಜೆಪಿಯ ‘ವಾಷಿಂಗ್ ಮೆಷಿನ್’ ಹೇಗೆ ಕೆಲಸ ಮಾಡುತ್ತದೆ?

Advertisements

“ಅವರು ಎಷ್ಟು ಬೇಕಾದರೂ ಪಿತೂರಿ ಮಾಡಲಿ. ಜೂನ್ 4 ರ ನಂತರ ಭ್ರಷ್ಟರ ವಿರುದ್ಧ ಕ್ರಮ ಹೆಚ್ಚಾಗುತ್ತದೆ ಎಂದು ನಾನು ನಿಮಗೆ ಗ್ಯಾರಂಟಿ ನೀಡಲು ಬಯಸುತ್ತೇನೆ. ನೀವು ಹೇಳಿ, ನಾವು ಈ ದೇಶದಿಂದ ಭ್ರಷ್ಟಾಚಾರವನ್ನು ತೊಡೆದುಹಾಕಬೇಕೇ ಅಥವಾ ಬೇಡವೇ? ಭ್ರಷ್ಟರನ್ನು ಜೈಲಿಗೆ ಕಳುಹಿಸುವುದು ಬೇಡವೇ? ಟಿಎಂಸಿಯ ಭ್ರಷ್ಟಾಚಾರವನ್ನು ತೊಲಗಿಸಬೇಕಲ್ಲವೇ? ಇದು ಮೋದಿ ಗ್ಯಾರಂಟಿ” ಎಂದು ಹೇಳಿದ್ದರು.

ಇಂದು ಬಂಕುರಾದಲ್ಲಿ ನಡೆದ ರ‍್ಯಾಲಿಯಲ್ಲಿ ಬ್ಯಾನರ್ಜಿ ಮೋದಿ ಗ್ಯಾರಂಟಿಯನ್ನು ಟೀಕಿಸಿದರು. “ಮೋದಿಯವರ ಗ್ಯಾರಂಟಿ ಏನು? ಜೂನ್ ನಂತರ ಎಲ್ಲರನ್ನೂ ಜೈಲಿಗೆ ಹಾಕುತ್ತಾರೆ. ಇದು ಪ್ರಧಾನಿಯಾದವರ ಮಾತನಾಡುವ ಶೈಲಿಯೇ? ಜೂನ್‌ನಲ್ಲಿ ಚುನಾವಣೆ ಮುಗಿದ ನಂತರ ಜನರನ್ನು ಆರಿಸಿ ಬಂಧಿಸುತ್ತಾರೆ? ಎಲ್ಲರನ್ನೂ ಜೈಲಿಗೆ ಹಾಕುತ್ತಾರೆಯೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿದ್ದೀರಾ?   ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಮತ್ತು ಪ್ರಧಾನ ಮಂತ್ರಿಗಳು ಹಿಂದೂಸ್ತಾನವನ್ನು ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, “ನೀವು ಎಲ್ಲೆಂದರಲ್ಲಿ ಜೈಲುಗಳನ್ನು ಮಾಡಿದ್ದೀರಿ. ನಿಮ್ಮ ಜೇಬಿನಲ್ಲಿ ಎನ್ಐಎ ಮತ್ತು ಇನ್ನೊಂದು ಜೇಬಿನಲ್ಲಿ ಸಿಬಿಐ ಇದೆ. ಒಂದು ಜೇಬಿನಲ್ಲಿ ಇಡಿ ಮತ್ತು ಇನ್ನೊಂದು ಜೇಬಿನಲ್ಲಿ ಆದಾಯ ತೆರಿಗೆ ಇಲಾಖೆಯಿದೆ” ಎಂದು ದೂರಿದರು.

“ಎನ್‌ಐಎ ಮತ್ತು ಸಿಬಿಐ ಬಿಜೆಪಿಯ ಸಹೋದರರು. ಆದಾಯ ತೆರಿಗೆ ಮತ್ತು ಇಡಿ ತೆರಿಗೆಗಳು ಬಿಜೆಪಿ ನಿಧಿ ಸಂಗ್ರಹದ ಪೆಟ್ಟಿಗೆಯಾಗಿದೆ,” ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ವಿರೋಧ ಪಕ್ಷದ ಆರೋಪಕ್ಕೆ ಇನ್ನಷ್ಟು ಬಲತುಂಬಿದರು.

ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಏಳು ಹಂತಗಳ ಚುನಾವಣೆ ನಡೆಯಲಿದೆ. 2019 ರಲ್ಲಿ 18 ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನ ಪಡೆದಿರುವ ಬಿಜೆಪಿ, ಆಡಳಿತಾರೂಢ ತೃಣಮೂಲ ವಿರುದ್ಧ ಈಗ ಮತ್ತೆ ಕಣಕ್ಕೆ ಇಳಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X