ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

Date:

Advertisements

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.

ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನ‌‌ದ‌ಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.

Advertisements

ಇದನ್ನು ಓದಿದ್ದೀರಾ? ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X