ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

Date:

Advertisements

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರ ರಾಜ್ಯದಲ್ಲಿ ಪದೇ ಪದೇ ಇಂಟರ್ನೆಟ್ ಸ್ಥಗಿತಗೊಳಿಸುವುದರ ವಿರುದ್ಧ ಇಬ್ಬರು ಮಣಿಪುರ ನಿವಾಸಿಗಳು ಸಲ್ಲಿಸಿದ್ದ ಮನವಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಹೈಕೋರ್ಟ್ ಈಗಾಗಲೇ ಇದೇ ರೀತಿಯ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠವು ತುರ್ತು ವಿಚಾರಣೆಗೆ ನಿರಾಕರಿಸಿತು.

ಚೋಂಗ್‌ಥಮ್ ವಿಕ್ಟರ್ ಸಿಂಗ್ ಮತ್ತು ಮಯೆಂಗ್‌ಬಾಮ್ ಜೇಮ್ಸ್ ಸಲ್ಲಿಸಿದ ಅರ್ಜಿಯ ಪರವಾಗಿ ನ್ಯಾಯವಾದಿ ಶದನ್ ಫರಾಸತ್ ಅವರು ತುರ್ತು ವಿಚಾರಣೆಯನ್ನು ಕೋರಿ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದಾಗ, ‘ಈ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಕಲಾಪವನ್ನು ಮತ್ತೆ ವಿಚಾರಣೆಗೊಳಪಡಿಸುವ ಅವಶ್ಯಕತೆ ಏನಿದೆ? ಸಾಮಾನ್ಯ ಪೀಠದ ಮುಂದೆ ಪ್ರಕರಣವನ್ನು ಪ್ರಸ್ತಾಪಿಸಿ,’ ಎಂದು ಪೀಠ ಹೇಳಿತು.

Advertisements

“ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಮತ್ತು ಸಾಂವಿಧಾನಿಕವಾಗಿ ರಕ್ಷಿಸಲ್ಪಟ್ಟ ಅಂತರ್ಜಾಲ ಮಾಧ್ಯಮವನ್ನು ಬಳಸಿಕೊಂಡು ಯಾವುದೇ ವ್ಯಾಪಾರ ಅಥವಾ ವ್ಯವಹಾರವನ್ನು ನಡೆಸುವ ಹಕ್ಕನ್ನು ಸ್ಥಗಿತಗೊಳಿಸುವ ಆದೇಶವು ಸಂಪೂರ್ಣವಾಗಿ ಅಸಮಂಜಸವಾಗಿದೆ” ಎಂದು ಅರ್ಜಿದಾರ ಚೊಂಗ್ಥಾಮ್ ವಿಕ್ಟರ್ ಸಿಂಗ್ ಅವರ ಪರವಾಗಿ ಹಾಜರಾದ ನ್ಯಾಯವಾದಿ ಶದನ್ ಫರಾಸತ್ ಹೇಳಿದರು.

ರಾಜ್ಯದ ನಿವಾಸಿಗಳು ಭಯ, ಆತಂಕ, ಅಸಹಾಯಕತೆ ಮತ್ತು ಹತಾಶೆಯ ಭಾವನೆಗಳನ್ನು ಅನುಭವಿಸಿದ್ದಾರೆ. ಸಾಮಾನ್ಯ ಜನರ ದೈನಂದಿನ ಚಟುವಟಿಕೆ ಸಾಧ್ಯವಾಗುತ್ತಿಲ್ಲ. ಕಚೇರಿ ಸಹೋದ್ಯೋಗಿಗಳೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪ: ಐಎಂಡಿ

ಮಕ್ಕಳನ್ನು ಶಾಲೆಗೆ ಕಳುಹಿಸಲು, ಬ್ಯಾಂಕ್ ಖಾತೆ ಬಳಸಲು, ಹಣ ಪಾವತಿ ಅಥವಾ ಸಂದಾಯಕ್ಕೆ, ಅಗತ್ಯ ಸಾಮಗ್ರಿ ಮತ್ತು ಔಷಧ ಇತ್ಯಾದಿಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ನಿಷೇಧದಿಂದಾಗಿ ಜೀವನ ಮತ್ತು ಜೀವನೋಪಾಯ ಸ್ಥಗಿತಗೊಂಡಿದೆ. ವಾಕ್ ಸ್ವಾತಂತ್ರ್ಯ ಮತ್ತು ವ್ಯಾಪಾರ ಮತ್ತು ಉದ್ಯೋಗವನ್ನು ಮುಂದುವರಿಸುವ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಜನರಿಗೆ ಅವಕಾಶ ನೀಡದೆ ಇರುವುದರಿಂದ ಈ ರೀತಿಯ ಆದೇಶಗಳು ತಾರತಮ್ಯ ಎಸಗುತ್ತಿವೆ ಎಂದು ತಿಳಿಸಲಾಗಿದೆ.

ಅಂತರ್ಜಾಲ ನಿಷೇಧದಿಂದ ಕಾನೂನುಬದ್ಧ ಗುರಿ ಈಡೇರುವುದಿಲ್ಲ. ಈಗಿನ ಪರಿಸ್ಥಿತಿ ಗಮನಿಸಿದರೆ ಕಾನೂನು ಮತ್ತು ಸುವ್ಯವಸ್ಥೆಯ ಉದ್ದೇಶದೊಂದಿಗೆ ನಿಷೇಧ ನೇರ ಸಂಬಂಧ ಹೊಂದಿಲ್ಲ. ಅಂತರ್ಜಾಲ ನಿಷೇಧ ಕುರಿತಾದ ಅಧಿಸೂಚನೆಗಳನ್ನು ಯಾವುದೇ ವೆಬ್‌ಸೈಟ್‌ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿಲ್ಲ. ಹೀಗಾಗಿ, ನಿವಾಸಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಥವಾ ನಿಷೇಧ ಪ್ರಶ್ನಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ಎಲ್ಲ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಮತ್ತೆ ಆರಂಭಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

ಕಳೆದ 35 ದಿನಗಳಿಂದ ಇಂಟರ್‌ನೆಟ್‌ ಸ್ಥಗಿತವನ್ನು ಮುಂದುವರೆಸುತ್ತಿದ್ದು, ಮಣಿಪುರ ಸರ್ಕಾರ ಮಂಗಳವಾರ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 10 ರವರೆಗೆ ಮತ್ತೆ ವಿಸ್ತರಿಸಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 100 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 310 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಸ್ತುತ 272 ಪರಿಹಾರ ಶಿಬಿರಗಳಲ್ಲಿ ಒಟ್ಟು 37,450 ಜನರು ಆಶ್ರಯ ಪಡೆದಿದ್ದಾರೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಕಣಿವೆ ರಾಜ್ಯದ ಜಿಲ್ಲೆಗಳಲ್ಲಿ ‘ಬುಡಕಟ್ಟು ಸಮುದಾಯದ ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ 3 ರಂದು ರಾಜ್ಯದಲ್ಲಿ ಮೊದಲು ಘರ್ಷಣೆಗಳು ಪ್ರಾರಂಭವಾದವು.

ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X