ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ; ವಿಚಾರಣೆಗೆ ಕೋರ್ಟ್ ಸಮ್ಮತಿ

Date:

Advertisements

ಗಂಗಾವತಿ ಶಾಸಕ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮ್ಮತಿಸಿದೆ. ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಹೇಳಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು. ಅವರ ಈ ಆರೋಪವು ಅಧಾರರಹಿತವಾಗಿದೆ. ಇಂತಹ ಹೇಳಿಕೆ ನೀಡಿ, ನನ್ನ ಮಾನಹಾನಿ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೇಕೆಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೆಂಥಿಲ್ ಮೊಕದ್ದಮೆ ದಾಖಲಿಸಿದ್ದಾರೆ.

ದೂರಿನಲ್ಲಿ; “ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಉಲ್ಲೇಖಿಸಿ ಆಧಾರಹಿತ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನಾನು ಈ ಹಿಂದೆ, ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಆಗ ರೆಡ್ಡಿ ಎಸಗಿದ್ದ ಅಕ್ರಮಗಳ ತನಿಖೆಯಲ್ಲಿ ಸಿಇಸಿ ಮತ್ತು ಸಿಬಿಐಗೆ ಅಗತ್ಯ ನೆರವು ನೀಡಿದ್ದೆ. ಇದರಿಂದ, ನನ್ನ ವಿರುದ್ಧ ಜನಾರ್ದನ ರೆಡ್ಡಿ ದ್ವೇಷ ಸಾಧಿಸುತ್ತಿದ್ದರು. ಅದೇ ದ್ವೇಷದಿಂದ, ನನ್ನನ್ನು ‘ಹಿಂಉ ವಿರೋಧಿ’, ‘ಧರ್ಮಸ್ಥಳ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್’ ಎಂದೆಲ್ಲ ಆಧಾರರಹಿತ ಆರೋಪ ಮಾಡಿದ್ದಾರೆ. ಅವರ ಹೇಳಿಕೆಗಳನ್ನು ಮಾಧ್ಯಮಗಳು ವರದಿ ಮಾಡಿವೆ” ಎಂದು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

ಸೆಂಥಿಲ್ ಅವರ ಖಾಸಗಿ ದೂರನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ ಕೋರ್ಟ್‌, ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ನಿಗದಿ ಮಾಡಿದೆ. ಅಂದು, ದೂರುದಾರರ ನ್ಯಾಯಾಲಯದಲ್ಲಿ ಹಾಜರಾಗಿ, ಸ್ವಯಂ ಹೇಳಿಕೆ ದಾಖಲಿಸಲು ಸೂಚಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X