ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತನಾಡಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು” ಎಂದರು.

ಕೇಂದ್ರ ಸರ್ಕಾರಕ್ಕೆ, ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

Advertisements

“15 ನೇ ಹಣಕಾಸು ಆಯೋಗದಲ್ಲಿ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11,495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ” ಎಂದು ಸಿಎಂ ಟೀಕಿಸಿದರು.

“ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ” ಎಂದು ಸಿಎಂ ತಿಳಿಸಿದರು.

“ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5,665 ಕೋಟಿ ರೂ. ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ರೂ. ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X