ಮುಡಾ ಪ್ರಕರಣ | ತನಿಖೆ ನಡೆಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

Date:

Advertisements

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ತಾನು ನಿರ್ಧರಿಸುವವರೆಗೆ ಲೋಕಾಯುಕ್ತ ತನಿಖೆಗೆ ನಿರ್ಬಂಧಿಸಿದ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ನಡೆಸಿ, ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, “ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆ ಮುಂದೂಡಬೇಕು” ಎಂದು ಮನವಿ ಮಾಡಿದರು.

Advertisements

ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್​, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಪೀಠ, ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರತಿವಾದಿಯನ್ನಾಗಿಸಲು ಸೂಚನೆ ನೀಡಿತು.

ವಿಚಾರಣೆ ವೇಳೆ ರವಿವರ್ಮ ಕುಮಾರ್​, “ನಮ್ಮ ಕಕ್ಷಿದಾರರಿಗೆ ಈವರೆಗೂ ನೋಟಿಸ್​ ಜಾರಿ ಮಾಡಿಲ್ಲ. ಆದರೂ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಾರದೆಂದು ಆದೇಶಿಸಲಾಗಿದೆ. ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೇಳಿಯೇ ಇಲ್ಲ. ಆದರೂ ಈ ಆದೇಶ ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ನಮ್ಮ ವಾದ ಆಲಿಸದೆಯೇ ಸ್ವಯಂಪ್ರೇರಿತವಾಗಿ ಈ ಆದೇಶ ನೀಡುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಇದಕ್ಕೆ ನ್ಯಾಯಪೀಠ, “ಅರ್ಜಿ ಸಲ್ಲಿಕೆಯಾಗಿ 35 ದಿನಗಳಾಗಿವೆ. ಆದರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿರಲಿಲ್ಲ. ಹೀಗಾಗಿ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಪ್ರತಿವಾದಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಯಾವುದೇ ಮಧ್ಯಂತರ ತಡೆ ನೀಡಿಲ್ಲ. ಸೆಷನ್ಸ್ ಕೋರ್ಟ್​ಗೆ ಡಿ.24ಕ್ಕೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಸಿದರೆ ಅರ್ಜಿ ವಿಚಾರಣೆಗೆ ತೊಂದರೆಯಾಗುತ್ತದೆ. ಹೀಗಾಗಿ ಅಂತಿಮ ವರದಿ ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲಾಗುತ್ತಿದೆ” ಎಂದು ನ್ಯಾಯಪೀಠ ತಿಳಿಸಿತು.

ಇದೇ ವೇಳೆ, “ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ” ಎಂದು ತಿಳಿಸಿ ವಿಚಾರಣೆ ಮುಂದೂಡಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X