ಮುಡಾ ಪ್ರಕರಣ | ನಾನು ದಾಖಲೆ ತಂದಿದ್ದು ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ: ಸಚಿವ ಬೈರತಿ ಸುರೇಶ್

Date:

Advertisements

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್​ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ನಾನು ದಾಖಲೆ ತಂದಿಲ್ಲ ಎಂಬುದು ಸಾಬೀತಾದರೆ ನನ್ನ ಮೇಲೆ ಆರೋಪಿಸಿದವರು ಏನು ಮಾಡುತ್ತಾರೆ ಹೇಳಲಿ” ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ಗೆ ಸವಾಲು ಹಾಕಿದರು.

“20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ. 2005ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಪ್ಲ್ಯಾನ್ ಮಾಡುತ್ತಿದ್ದೇನೆ. ಸುಮ್ಮ ಸುಮ್ಮನೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್​ ಶಾಸಕ ಜಿ ಟಿ ದೇವೇಗೌಡ ತನಿಖಾಧಿಕಾರಿನಾ” ಎಂದು ಪ್ರಶ್ನಿಸಿದರು.

Advertisements

ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, “ಐಎಎಸ್​ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ? ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮುಚ್ಚಿ ಹಾಕಲ್ಲ, ಸರ್ಕಾರ ಯಾರನ್ನೂ ಬಿಡಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲ ಗೊತ್ತಾಗುತ್ತೆ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

Download Eedina App Android / iOS

X