ಮುಡಾ | ಸಿಎಂ ಪತ್ನಿ ಪಾರ್ವತಿ, ಬೈರತಿ ಸುರೇಶ್‌ಗೆ ಇ.ಡಿ ಸಮನ್ಸ್​; ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Date:

Advertisements

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೀಡಿದ್ದ ಇ.ಡಿ ಸಮನ್ಸ್​ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮುಡಾ ಹಗರಣದಲ್ಲಿ ಎ2 ಆರೋಪಿಯಾಗಿರುವ ಪಾರ್ವತಿ ಸಿದ್ದರಾಮಯ್ಯ ಮತ್ತು ಮುಡಾದಿಂದ ಕಡತಗಳನ್ನು ತೆಗೆದುಕೊಂಡು ಹೋಗಿರುವ ಆರೋಪದ ಮೇಲೆ ಸಚಿವ ಬೈರತಿ ಸುರೇಶ್‌ ಅವರಿಗೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್‌ ನೀಡಿತ್ತು.

ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಎರಡು ಅರ್ಜಿ ವಿಚಾರಣೆ ನಡೆಸಿ, ಮುಂದಿನ ವಿಚಾರಣೆವರೆಗೆ ಅಂದರೆ ಫೆಬ್ರವರಿ 10ರ ವರೆಗೆ ಇ.ಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿದರು.

Advertisements

ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, “14 ಸೈಟ್ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಹೀಗಾಗಿ ತನಿಖೆಗೆ ತಡೆ ನೀಡುವಂತೆ” ಕೋರ್ಟ್​ಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಚಿವ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, “ಬೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸ್‌ನ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಇ.ಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಕೇಸ್‌ನಲ್ಲಿ ಸಮನ್ಸ್ ರದ್ದುಪಡಿಸಲಾಗಿದೆ. ಡಾ.ನಟೇಶ್‌ಗೆ ಇ.ಡಿ ನೀಡಿದ್ದ ಸಮನ್ಸ್‌ನ್ನು ಹೈಕೋರ್ಟ್ ರದ್ದುಪಡಿಸಿದೆ. ಹೀಗಾಗಿ ಮುಂದಿನ ವಿಚಾರಣೆವರೆಗೂ ಇ.ಡಿಯಿಂದ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದರು.

ಸಿಎಂ ಪ್ರಕರಣದ ವಿಚಾರಣೆ ನಡೆಯುವಾಗ ಇದರಲ್ಲೇಕೆ ಮುಂದುವರಿಯುತ್ತೀರಾ? ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇ.ಡಿ ತನಿಖೆಯಿಂದ ಹೈಕೋರ್ಟ್ ಕಾಯ್ದಿರಿಸಿರುವ ಕೇಸ್‌ಗೆ ಹಾನಿಯಾಗಬಾರದು. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲವೆಂದು ಆದೇಶ ನೀಡಿದ್ದೇನೆ. ಈಗ ಇ.ಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? ಈಗಲೇ ತನಿಖೆ ನಡೆಸಬೇಕಾದ ತುರ್ತು ಅಗತ್ಯವೇನಿದೆ” ಎಂದು ನ್ಯಾ. ಎಂ.ನಾಗಪ್ರಸನ್ನ ಪ್ರಶ್ನಿಸಿದರು.

“ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಎಂದಷ್ಟೇ ಹೇಳಿದ್ದೇವೆ. ಇದರಿಂದ ಹೈಕೋರ್ಟ್ ಮುಂದಿರುವ ಕೇಸ್‌ಗೆ ಅಡ್ಡಿಯಾಗುವುದಿಲ್ಲ” ಎಂದು ಇ.ಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ಸ್ಪಷ್ಟಪಡಿಸಿದರು.

“ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅಂತಿಮ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಇಡಿ ನಡೆಸುತ್ತಿರುವ ತನಿಖೆ ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಆಧರಿಸಿದೆ. ಹೀಗಾಗಿ ಇಡಿ ಸಮನ್ಸ್ ನಿಂದ ಹೈಕೋರ್ಟ್ ಕಾಯ್ದಿರಿಸುವ ಕೇಸ್ ಮೇಲೆ ಪರಿಣಾಮವಾಗಬಹುದು. ಡಾ. ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಇಡಿ ಸಮನ್ಸ್ ರದ್ದುಪಡಿಸಿದೆ. ಇಡಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ ಅಷ್ಟೇ ಎಂದು ಇಡಿ ಪರ ವಕೀಲರು ಹೇಳಿದ್ದಾರೆ. ಆದ್ರೆ, ಇ.ಡಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ” ನ್ಯಾಯಾಧೀಶರು ತಿಳಿಸಿ ವಿಚಾರಣೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X