ಮುಡಾ ಅಕ್ರಮ | ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

Date:

Advertisements

ಸದನದಲ್ಲಿ ಮುಡಾ ವಿಚಾರವಾಗಿ ಚರ್ಚಿಸಲು ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಗುರುವಾರ ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ- ಜೆಡಿಎಸ್ ಪ್ರಮುಖರು ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಭಾಗವಹಿಸಿದ್ದರು.

ಚರ್ಚಿಸಿ ಮುಂದಿನ ಹೋರಾಟ: ವಿಜಯೇಂದ್ರ

Advertisements

“ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಸಂಬಂಧ ಮುಂದಿನ ದಿನಗಳಲ್ಲಿ ನಡೆಸಲಿರುವ ಹೋರಾಟದ ಕುರಿತು ನಾವು ಮತ್ತು ನಮ್ಮ ಎನ್‍ಡಿಎ ಭಾಗೀದಾರ ಪಕ್ಷ ಜೆಡಿಎಸ್ ಜೊತೆ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ” ಎಂದು ಶಾಸಕ ಬಿ ವೈ ವಿಜಯೇಂದ್ರ ಪ್ರಕಟಿಸಿದರು.

ಕಲಾಪವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಇ.ಡಿ ವಿರುದ್ಧ ಧರಣಿ ನಡೆಸಿದ್ದಲ್ಲದೆ, ಇ.ಡಿ ವಿರುದ್ಧ ಎಫ್‍ಐಆರ್ ದಾಖಲಿಸಿ ಬೆದರಿಸುವ ತಂತ್ರಗಾರಿಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ವಾಲ್ಮೀಕಿ ಹಗರಣ ಎಲ್ಲಿ ತಮ್ಮ ಬುಡಕ್ಕೆ ಬರಲಿದೆಯೋ ಎಂದು ಮುಖ್ಯಮಂತ್ರಿಗಳು ಹೆದರಿಕೊಂಡಿದ್ದಾರೆ. ಮೂಡ ಹಗರಣದಲ್ಲಿ ಸಿದ್ದರಾಮಯ್ಯನವರು ಚರ್ಚೆ ನಡೆಸಿ ವಿಪಕ್ಷಕ್ಕೆ ಸವಾಲು ಹಾಕಲಿದ್ದಾರೆ ಎಂದು ನಿರೀಕ್ಷೆಯಲಿದ್ದೆವು. ಆದರೆ, ಮುಖ್ಯಮಂತ್ರಿಗಳು ಪಲಾಯನವಾದ ಮಾಡಿದ್ದಾರೆ. ಚರ್ಚೆಯಿಂದ ಓಡಿ ಹೋಗುವ ಕೆಲಸ ಮಾಡಿದ್ದಾರೆ” ಎಂದು ಟೀಕಿಸಿದರು.

“ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು; ಮಾನ್ಯ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂಬ ಒತ್ತಾಯವನ್ನು ರಾಜ್ಯಪಾಲರ ಗಮನಕ್ಕೂ ತಂದಿದ್ದೇವೆ ಎಂದು ವಿವರಿಸಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ಈ ಸರಕಾರವು ಬೃಹತ್ ಹಗರಣಗಳಲ್ಲಿ ಪಾಲ್ಗೊಂಡಿರುವುದು ಜಗಜ್ಜಾಹೀರಾಗಿದೆ. ಇತಿಹಾಸದಲ್ಲಿ ಯಾವುದೇ ಸದನದಲ್ಲೂ ಆಡಳಿತ ಪಕ್ಷಕ್ಕೆ ಈ ರೀತಿಯ ಅವಮಾನ ಆಗಿಲ್ಲ. ಮುಖ್ಯಮಂತ್ರಿಗಳೇ ಲೂಟಿ ಮಾಡಿದ 2 ಹಗರಣಗಳು ಚರ್ಚೆಗೆ ಬಂದಿವೆ” ಎಂದರು.

“3 ರಿಂದ 4 ಸಾವಿರ ಕೋಟಿಯ ಮೂಡ ಹಗರಣ, 187 ಕೋಟಿಯ ವಾಲ್ಮೀಕಿ ನಿಗಮದ ಹಗರಣಗಳು ನಡೆದಿವೆ. ಸಿದ್ದರಾಮಯ್ಯನವರು ಹಿಂದೆ ಡಿಸಿಎಂ ಆಗಿದ್ದಾಗ ಮೂಡ ಹಗರಣ ಆರಂಭವಾಗಿತ್ತು. ಸಿಎಂ ಪತ್ನಿಗೆ 14 ನಿವೇಶನ, ಇವರ ಬೆಂಬಲಿಗರಿಗೆ ನೂರಾರು ನಿವೇಶನ ಹಂಚಿ ಲೂಟಿ ಮಾಡಿದ್ದಾರೆ” ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಮಾತನಾಡಿ, “ಕಾನೂನಿನಡಿ ಎಸ್.ಸಿ ಜಮೀನನ್ನು ಕೊಂಡುಕೊಳ್ಳುವುದು ತಪ್ಪು. ತಪ್ಪು ಮಾಡಿದ್ದು ಗೊತ್ತಿದ್ದ ಕಾರಣ ಸದನದಲ್ಲಿ ಉತ್ತರಿಸದೆ, ದಾಖಲೆ ಮಂಡನೆಗೆ ಅವಕಾಶ ಕೊಡದೆ, ಹೊರಗಡೆ ಉತ್ತರ ಕೊಟ್ಟಿದ್ದಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X