ಮುಡಾ ಅಕ್ರಮ | ಸಿದ್ದರಾಮಯ್ಯ ಸೇರಿ ಎಲ್ಲರಿಂದ ಮುಡಾ ಮಾನ ಹರಾಜು: ಎಚ್ ವಿಶ್ವನಾಥ್

Date:

Advertisements

“ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಎಂಎಲ್‌ಸಿ ಎಚ್ ವಿಶ್ವನಾಥ್ ಆಗ್ರಹಿಸಿದರು.

ಮುಡಾದಲ್ಲಿ ಸಾವಿರಾರು ಕೋಟಿ ಹಗರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮೈಸೂರಿನ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

“ಮಹಾರಾಜರು ಸ್ಥಾಪಿಸಿದ ಮುಡಾದ ಮಾನವನ್ನು ಎಲ್ಲರೂ ಸೇರಿಕೊಂಡು ಹರಾಜು ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸೇರಿಕೊಂಡು ಮುಡಾದ ಮಾನ ಹರಾಜು ಹಾಕಿದ್ದಾರೆ. ಅಹಿಂದ ಹೆಸರಿನಲ್ಲಿ ಓಟು ತೆಗೆದುಕೊಂಡು ಅಹಿಂದ ಸಮುದಾಯಕ್ಕೆ ಟೋಪಿ ಹಾಕುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಮುಡಾ ಹಗರಣವನ್ನು ಅಷ್ಟು ಸುಲಭವಾಗಿ ಮುಚ್ಚಿ ಹಾಕಲು ಸಾಧ್ಯವಿಲ್ಲ” ಎಂದು ಹೇಳಿದರು.

Advertisements

“ಬದಲಿ ನಿವೇಶನ ಪಡೆದಿದ್ದೇನೆ ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಮುಡಾದ ಅಕ್ರಮದಲ್ಲಿ ನನ್ನ ಪಾಲು ಇದೆ ಎಂದಿದ್ದಾರೆ. ನನ್ನ ಪತ್ನಿಗೆ ದೇವನೂರು 3ನೇ ಹಂತದಲ್ಲಿ ನೀಡಿದ್ದ ನಿವೇಶನದ ಬಳಿ ವರುಣ ನಾಲೆ ಹಾದು ಹೋಗಿದೆ. ಆ ಸ್ಥಳ ಮನೆ ನಿರ್ಮಿಸಲು ಯೋಗ್ಯವಾಗಿರಲಿಲ್ಲ. ಹಾಗಾಗಿ ಬೇರೆಡೆ ನಿವೇಶನ ನೀಡಿದ್ದಾರಷ್ಟೇ. ನನ್ನ ವಿರುದ್ಧ ಆರೋಪ ಮಾಡಿರುವ ಮುಡಾದ ಅಧ್ಯಕ್ಷ ಓರ್ವ ಮೂಢ” ಎಂದರು.

ಎಚ್ ವಿಶ್ವನಾಥ್ ಕೂಡ ಬದಲಿ ನಿವೇಶನ ಪಡೆದಿದ್ದಾರೆಂದು ಮುಡಾ ಅಧ್ಯಕ್ಷ ಕೆ ಮರೀಗೌಡ ಆರೋಪಿಸಿದ್ದರು. ಇದಕ್ಕೆ ಉತ್ತರಿಸಿದ ವಿಶ್ವನಾಥ್, “ಎಲ್ಲ ಕಾನೂನು ಬದ್ದವಾಗಿ ನಡೆದಿದೆ ಎಂದಿದ್ದಾರೆ. ಈ ವಿಚಾರದಲ್ಲಿ ಮುಡಾದವರು, ಸಚಿವರು ಬಾಯಿಗೆ ಬಂದಂತೆ ಮಾತನಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಬೇಕು” ಎಂದು ತಿಳಿಸಿದರು.

“ನಮ್ಮ ಕುಟುಂಬಕ್ಕೆ ವಿಜಯನಗರ ಬಡಾವಣೆಯಲ್ಲಿ ಸೈಟ್ ಕೊಟ್ಟಿಲ್ಲ. ನನಗೂ ಸಿದ್ದರಾಮಯ್ಯಗೂ ಒಂದೇ ಅವಧಿಯಲ್ಲಿ ನಿವೇಶನ ಮಂಜೂರು ಆಗಿದೆ. ಕೆಳಗಿನ ಸೈಟ್ ಬದಲು ಮೇಲುಗಡೆ ಕೊಟ್ಟಿದ್ದಾರೆ. ನನಗೆ ಸೈಟ್ ಇದೆ ಅನ್ನೋದಾದ್ರೆ ನಿಮಗೆ ಯಾಕೆ ಸೈಟ್ ಇಲ್ಲ? ಈ ವಿಚಾರದಲ್ಲಿ ನನ್ನ ಹೆಂಡತಿಗೊಂದು ನ್ಯಾಯ, ಸಿದ್ದರಾಮಯ್ಯ ಅವರ ಹೆಂಡತಿಗೊಂದು ನ್ಯಾಯವೇ? ಇದೊಂದು ಕರ್ಮಕಾಂಡ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X