ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

Date:

Advertisements

ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ. ಈ ಮೂಲಕ ಯೂಟರ್ನ್ ಹೊಡೆದಿದ್ದಾರೆ.

ಬುಧವಾರ ಘಟಕ್‌ಪುರದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೋಶಿ ನೀಡಿದ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷವಾದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಜೋಶಿ ಹೇಳಿಕೆಯನ್ನು ಟೀಕಿಸಿದ್ದರು. ಇದಾದ ಬೆನ್ನಲ್ಲೇ ಜೋಶಿ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರಕಾರಕ್ಕೆ ವಿಜಯೇಂದ್ರ ಆಗ್ರಹ

Advertisements

ಘಟಕ್‌ಪುರದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ನಾಯಕ, “ಮುಂಬೈನಲ್ಲಿ ಒಂದೇ ಭಾಷೆ ಇರುವುದಲ್ಲ. ಮುಂಬೈನ ಪ್ರತಿ ಭಾಗದಲ್ಲಿಯೂ ಬೇರೆ ಬೇರೆ ಭಾಷೆಯಿದೆ. ಘಟಕ್‌ಪುರದ ಭಾಷೆ ಗುಜರಾತಿಯಾಗಿದೆ. ಮುಂಬೈನಲ್ಲಿ ನೆಲೆಸಿದ್ದರೆ ಮರಾಠಿಯನ್ನೇ ಕಲಿಯಬೇಕು ಎಂಬ ಅಗತ್ಯವೇನಿಲ್ಲ” ಎಂದು ಹೇಳಿದ್ದರು.

ವಿಪಕ್ಷಗಳ ಟೀಕೆಗೆ ಒಳಗಾಗುತ್ತಿದ್ದಂತೆ ಯೂಟರ್ನ್ ಹೊಡೆದಿರುವ ಆರ್‌ಎಸ್‌ಎಸ್‌ ನಾಯಕ, “ಮರಾಠಿ ಮುಂಬೈನ ಸ್ಥಳೀಯ ಭಾಷೆ, ಈ ಬಗ್ಗೆ ನನಗೆ ಹೆಮ್ಮೆಯಿದೆ. ಆ ಬಗ್ಗೆ ಎರಡು ಅಭಿಪ್ರಾಯಗಳು ನನ್ನಲ್ಲಿ ಇಲ್ಲ. ಬೇರೆ ಬೇರೆ ಭಾಷೆಯನ್ನು ಮಾತನಾಡುವ ಜನರು ಮುಂಬೈನಲ್ಲಿ ಇದ್ದಾರೆ, ಆದರೆ ಸಾಮರಸ್ಯದಿಂದ ಬದುಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

“ಇತರೆ ರಾಜ್ಯಗಳಿಂದ ಬರುವವರು ಮತ್ತು ಇತರ ಭಾಷೆಗಳನ್ನು ಮಾತನಾಡುವವರೂ ಕೂಡಾ ಮರಾಠಿ ಅರ್ಥಮಾಡಿಕೊಳ್ಳಬೇಕು ಎಂದು ಬಯಸುತ್ತೇವೆ. ನಾನು ಘಟಕ್‌ಪುರದಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X