ಮುನಿರತ್ನ ಪ್ರಕರಣ | ವಿಪಕ್ಷ ನಾಯಕ ಆರ್‌ ಅಶೋಕ್‌ಗೆ ‘HIV’ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು; ಹೆಬ್ಬಗೋಡಿ ಠಾಣೆಯ ಎಸ್‌ಐ ಬಂಧನ

Date:

Advertisements

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ತಿರುವು ಸಿಕ್ಕಿದ್ದು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಅಯ್ಯಣ್ಣ ರೆಡ್ಡಿ ಅವರನ್ನು ಎಸ್‌ಐಟಿ ಗುರುವಾರ ಸಂಜೆ ಬಂಧಿಸಿದೆ. ಇನ್ಸ್ ಪೆಕ್ಟರ್ ಅಯ್ಯಣ್ಣ ರೆಡ್ಡಿ ಬಂಧನವನ್ನು ಎಸ್ಐಟಿ ಮೂಲಗಳು ಕೂಡ ಖಚಿತಪಡಿಸಿವೆ.

ಹನಿಟ್ರ್ಯಾಪ್​ ಪ್ರಕರಣದಲ್ಲಿ ಸಹಕಾರ ನೀಡಿದ ಆರೋಪದ ಮೇಲೆ ಅಯ್ಯಣ್ಣ ರೆಡ್ಡಿಯವರನ್ನು ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ ಮೂಲಕ ಮುನಿರತ್ನ ಪ್ರಕರಣದಲ್ಲಿ ಮಹತ್ವದ ತಿರುವು ಪಡೆದಿದೆ.

Advertisements
1002358460

“ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೇ, ಆರೋಪಿಗಳು ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಇನ್‌ಸ್ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರೆಂಬ ಆರೋಪದ ಅಡಿ ಬಂಧಿಸಲಾಗಿದೆ’ ಎಂದು ತಿಳಿದು ಬಂದಿದೆ.

ಆರೋಪಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಏನಿದು ಪ್ರಕರಣ?
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಪ್ರಕರಣ ಸಂಬಂಧ ಅಕ್ಟೋಬರ್​ 15ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. ಕಗ್ಗಲೀಪರ ಪೊಲೀಸ್​ ಠಾಣೆಯಲ್ಲಿ ಸುಮಾರು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕರ ಮೇಲೆ ಎಫ್​ಐಆರ್ ದಾಖಲಾಗಿತ್ತು.

ರಾಮನಗರದ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರು ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದರು. ಅಲ್ಲದೇ, ಪ್ರಕರಣದಲ್ಲಿ 7 ಮಂದಿಯ ವಿರುದ್ಧ ಎಫ್​ಐಆರ್ ಆಗಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವರ್ಗಾವಣೆ ಮಾಡಿದೆ. ಇದಕ್ಕೂ ಮುನ್ನ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ಒಕ್ಕಲಿಗ ಹಾಗೂ ದಲಿತ ಸಂಘಟನೆಗಳು ರಾಜ್ಯದಾದ್ಯಂತ ಭಾರೀ ಪ್ರತಿಭಟನೆ ನಡೆಸಿದ್ದವು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X