ಮುನಿರತ್ನ ಪ್ರಕರಣ | ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಆರೋಪ

Date:

Advertisements

ರಾಜ್ಯದ ಕಾಂಗ್ರೆಸ್ ಸರಕಾರ ಪೂರ್ವಗ್ರಹಪೀಡಿತವಾಗಿ ವರ್ತಿಸುತ್ತಿದೆ. ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ಕೂಡ ದಾಖಲಾಗುವುದಿಲ್ಲ. ಮುನಿರತ್ನ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ದಾಖಲಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಮುಂದೆ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ರಾಜ್ಯ ಸರಕಾರ ತೋರಿಸಬೇಕಿತ್ತು. ಚನ್ನಾರೆಡ್ಡಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಾದರೆ ಅವರನ್ನು ಬಂಧಿಸುವುದಿಲ್ಲ. ಆದರೆ, ಮುನಿರತ್ನ ಮೇಲೆ ಅಟ್ರಾಸಿಟಿ ಕೇಸ್ ಆದರೆ ಅರೆಸ್ಟ್ ಮಾಡುತ್ತಾರೆ. ಈ ಸರಕಾರ ದ್ವೇಷದ ರಾಜಕಾರಣ ಮಾಡುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು” ಎಂದು ಪ್ರಶ್ನಿಸಿದರು.

“ತನಿಖೆ ಮಾಡಿ ತಪ್ಪಾಗಿದ್ದರೆ ಶಿಕ್ಷೆ ಆಗಲಿದೆ. ಆದರೆ, ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಮತ್ತೊಂದು ನ್ಯಾಯ ಮಾಡಲು ಇವರಿಗೆ ಅಧಿಕಾರ ಕೊಟ್ಟಿಲ್ಲ. ಸಿದ್ದರಾಮಯ್ಯನವರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತನಿಖೆ ಎದುರಿಸಲು ಹಿಂಜರಿಯುತ್ತಿರಲಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟರೆ ತನಿಖೆ ಎದುರಿಸಲು ಮುಖ್ಯಮಂತ್ರಿಗಳು ಭಯ ಪಡುತ್ತಾರೆ. ರಾಜ್ಯಪಾಲರ ವಿರುದ್ಧ ಚಳವಳಿ ಮಾಡುವ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ತಮ್ಮದು ಕಳಂಕರಹಿತ ಆಡಳಿತ ಎಂದು ತೀರ್ಪು ಕೊಟ್ಟುಕೊಳ್ಳುತ್ತಾರೆ. ಅವರೇ ಜಡ್ಜ್, ಅವರೇ ಲಾಯರ್” ಎಂದು ಲೇವಡಿ ಮಾಡಿದರು.

“ಮುಖ್ಯಮಂತ್ರಿಯವರೇ, ನಿಮ್ಮದು ಕಳಂಕರಹಿತ ಆಡಳಿತ ಅಲ್ಲ ಎನ್ನಲು ನಮ್ಮ ಹತ್ತಿರ ಸಾಕಷ್ಟು ಸಾಕ್ಷಿಗಳಿವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X