ಪರ್ಯಾಯ ಆಯ್ಕೆ ಸಿಕ್ಕ ಮೇಲೆ ಮುಸ್ಲಿಮರು ಕಾಂಗ್ರೆಸ್ ಕೈಬಿಡುತ್ತಾರೆ: ಆರ್‌ ಅಶೋಕ್

Date:

Advertisements

ಕರ್ನಾಟಕದಲ್ಲಿ ಕಾಂಗ್ರೆಸ್‌ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು ಮುಸ್ಲಿಂ ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರದಲ್ಲಿ, ಹರಿಯಾಣದಲ್ಲಿ ಆದ ಗತಿಯೇ ಕರ್ನಾಟಕದಲ್ಲಿಯೂ ಬರುವುದು ನಿಶ್ಚಿತ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ಸದನದಲ್ಲಿ ಮಾತಾನಾಡುವಾಗ ಅತಿಯಾದ ಮುಸ್ಲಿಂ ಓಲೈಕೆ, ವ್ಯಾಮೋಹ, ತುಷ್ಟೀಕರಣವೇ ಕಾಂಗ್ರೆಸ್ ಪಕ್ಷಕ್ಕೆ ಮುಂದೊಂದು ದಿನ ಮುಳುವಾಗುತ್ತೆ ಎಂದು ಭವಿಷ್ಯ ನುಡಿದಿದ್ದೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯ ಫಲಿತಾಂಶ ನನ್ನ ಮಾತನ್ನ ಸಾಬೀತು ಪಡಿಸಿದೆ” ಎಂದಿದ್ದಾರೆ.

“ಎಲ್ಲಿಯವರೆಗೂ ಪರ್ಯಾಯ ಆಯ್ಕೆ ಇರುವುದಿಲ್ಲವೋ ಅಲ್ಲಿಯವರೆಗೆ ಮಾತ್ರ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕಟು ಸತ್ಯವನ್ನು ಕಾಂಗ್ರೆಸ್ ಪಕ್ಷ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು. ಮುಸ್ಲಿಂ ಬಾಹುಳ್ಯದ ಕಾಶ್ಮೀರ ಪ್ರಾಂತ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಗತ್ಯವೇ ಇಲ್ಲ ಎನ್ನುವ ಧಾಟಿಯಲ್ಲಿ ಇಂಡಿ ಮಿತ್ರ ಪಕ್ಷ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಓಮರ್ ಅಬ್ದುಲ್ಲಾ ಅವರು ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಬಾಹುಳ್ಯದ ಜಮ್ಮು ಪ್ರಾಂತ್ಯದ ಮೇಲೆ ಗಮನ ಹರಿಸಲು ಬಹಿರಂಗ ಸಲಹೆ ನೀಡಿದ್ದರು. ಆದರೆ ಅತ್ತ ಮುಸ್ಲಿಮರ ಮತಗಳೂ ಇಲ್ಲದೆ, ಇತ್ತ ಹಿಂದೂಗಳ ಮತಗಳೂ ಇಲ್ಲದೆ ಕಾಂಗ್ರೆಸ್ ಪಕ್ಷ ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣವಾಗಿ ಸೋತು ಸುಣ್ಣವಾಗಿದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

“2014ರ ವಿಧಾನಸಭಾ ಚುನಾವಣೆಯಲ್ಲಿ 18% ಮತ ಪ್ರಮಾಣದ ಮೂಲಕ 12 ಸ್ಥಾನ ಗೆದಿದ್ದ ಕಾಂಗ್ರೆಸ್ ಪಕ್ಷ, 2024ರಲ್ಲಿ 12% ಮತ ಪಡೆಯುವ ಮೂಲಕ ಕೇವಲ 6 ಸ್ಥಾನಗಳಿಗೆ ಸೀಮಿತವಾಗಿದೆ. ಹಿಂದೂ ಬಾಹುಳ್ಯದ ಜಮ್ಮುವಿನಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಿದ್ದ 29 ಸ್ಥಾನಗಳಲ್ಲಿ ಕೇವಲ 1 ಸ್ಥಾನ ಗೆಲ್ಲಲು ಸಾಧ್ಯವಾಗಿದೆ” ಎಂದು ವಿಶ್ಲೇಷಿಸಿದ್ದಾರೆ.

“ಮತ್ತೊಂದು ಕಡೆ 2014ರಲ್ಲಿ 25 ಸೀಟು ಪಡೆದಿದ್ದ ಬಿಜೆಪಿ 2024ರಲ್ಲಿ 29 ಸೀಟು ಪಡೆದಿದೆ. 25.64% ಮತ ಗಳಿಸುವ ಮೂಲಕ ಮತಗಳಿಕೆ ಪ್ರಮಾಣದಲ್ಲಿ ನಷ್ಯಾನಲ್ ಕಾನ್ಫರೆನ್ಸ್ ಪಕ್ಷವನ್ನೂ ಮೀರಿಸಿ ಬಿಜೆಪಿ ಮೊದಲ ಸ್ಥಾನ ಪಡೆದಿದೆ. ಪ್ರಜ್ಞಾವಂತ ಮತದಾರರು ಅಭಿವೃದ್ದಿ ರಾಜಕಾರಣಕ್ಕೆ ಮತ ನೀಡುತ್ತಾರೆ, ಓಲೈಕೆ ರಾಜಕಾರಣವನ್ನು ತಿರಸ್ಕರಿಸುತ್ತಾರೆ ಎನ್ನುವುದಕ್ಕೆ ಜಮ್ಮು ಕಾಶ್ಮೀರದ ಚುನಾವಣೆಯೇ ಸಾಕ್ಷಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X