ಮೈಸೂರು | ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

Date:

Advertisements

ಆರ್​ಟಿಐ ಕಾರ್ಯಕರ್ತ ಗಂಗರಾಜು ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ
ಗಂಭೀರ ಆರೋಪ ಮಾಡಿದ್ದಾರೆ.

“ಮೈಸೂರು ಮುಡಾ ಪ್ರಕರಣ ತನಿಖಾ ಹಂತದಲ್ಲಿದ್ದು, ಇ.ಡಿ ದಾಳಿ ನಡೆಸಿ ಕಡತಗಳನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿರುವ ಸಮಯದಲ್ಲಿ ಮೂಡಾಗೆ ಬಿಟ್ಟುಕೊಟ್ಟ ರಸ್ತೆ ಜಾಗ ಹಾಗೂ ಪೈಪ್‌ಲೈನ್ ಜಾಗವನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮುಡಾಗೆ ಸೇರಿದೆ ಎನ್ನಲಾದ 7 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್‌ 29ರಂದು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದು, ಮೈಸೂರು ನಗರದ ಕೆಆರ್​​ಎಸ್ ರಸ್ತೆಯಲ್ಲಿನ ಸರ್ವೇ ನಂಬರ್ 454ರ ಜಾಗ ನೋಂದಾಯಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ಸದರಿ ಜಾಗದಲ್ಲಿ ಗಣೇಶ್ ದೀಕ್ಷಿತ್ ಎಂಬುವವರಿಗೆ ಸೇರಿದ 4 ಎಕರೆ 11 ಗುಂಟೆ ಜಾಗವಿದ್ದು, ಅದರಲ್ಲಿ 20 ಗುಂಟೆ ಜಾಗವನ್ನು ಸಿಎಂ ಪತ್ನಿ ಪಾರ್ವತಿಯವರು 20 ಗುಂಟೆ ಜಾಗಕ್ಕೆ 1.85 ಕೋಟಿ ರೂಪಾಯಿ ಕೊಟ್ಟು ಖರೀದಿಸಿದ್ದರು. 20 ಗುಂಟೆ ಅಂದರೆ 21,771,99 ಚದರಡಿ ಜಾಗವನ್ನು ನೋಂದಣಿ ಮಾಡಿಸಿಕೊಂಡಿದ್ದರು. ಅದರಲ್ಲಿ 8998 ಚದರಡಿ ಜಾಗವನ್ನು ಗಣೇಶ್ ದೀಕ್ಷಿತ್, ರಸ್ತೆ ಮತ್ತು ಪೈಪ್‌ಲೈನ್‌ಗಾಗಿ ಮುಡಾಗೆ ಬಿಟ್ಟುಕೊಟ್ಟಿದ್ದರು. ಆದರೆ ಮುಡಾಗೆ ಬಿಟ್ಟಿದ್ದ ರಸ್ತೆ ಮತ್ತು ಪೈಪ್‌ಲೈನ್​​ ಜಾಗವನ್ನೂ ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡು ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ” ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅ.20ರಂದು ದೇಶದ ಮೊದಲ ರೈತರ ಶಾಲೆಗೆ ಶಂಕುಸ್ಥಾಪನೆ

ಆರ್​ಟಿಐ ಕಾರ್ಯಕರ್ತ ಗಂಗರಾಜು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆರ್‌ಟಿಐ ಅಡಿ ದಾಖಲೆ ಕೋರಿ ಮಾಹಿತಿ ಸಲ್ಲಿಸಿದ್ದೆ. ಇದರ ಮಾಹಿತಿ ಪ್ರಕಾರ ಮುಡಾದಲ್ಲಿ ಪಾರ್ವತಿಯವರು ದಿನಾಂಕ 2024ರ ಆಗಸ್ಟ್‌ 30 ಹಾಗೂ 31ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದಾರೆ” ಎಂದು ಹೇಳಿದ್ದಾರೆ.

“ಮುಡಾದ ಜಾಗವಾದ ರಸ್ತೆ ಹಾಗೂ ಪೈಪ್‌ಲೈನ್ ಜಾಗ ಹೊರತುಪಡಿಸಿ ಇನ್ನುಳಿದ 12,782 ಚದರಡಿ ಜಾಗಕ್ಕೆ ಮರು ನೋಂದಣಿ ಮಾಡಿಸಿಕೊಂಡಿದ್ದಾರೆ” ಎಂದು ಗಂಗರಾಜು ಹೇಳಿಕೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X