ಮೈಸೂರು | ಮುಸ್ಲಿಮರ ವಿರುದ್ಧ ಅವಹೇಳನ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

Date:

Advertisements

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಾಪ್‌ ಸಿಂಹ ವಿರುದ್ಧ ಮೈಸೂರಿನ ಉದಯಗಿರಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರತಾಪ್ ಸಿಂಹ ಬೆಂಬಲಿಗನೇ ಎಂದು ಹೇಳಲಾದ ಸುರೇಶ್ ಎಂಬಾತ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಾಕಾರಿ ಪೋಸ್ಟರ್‌ ಹಂಚಿಕೊಂಡಿದ್ದ. ಆತನ ವಿರುದ್ಧ ಫೆಬ್ರವರಿ 10ರಂದು ಮುಸ್ಲಿಂ ಸಮುದಾಯವು ಉದಯಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಲ್ಲುತೂರಾಟವೂ ನಡೆದಿತ್ತು.

Advertisements

ಘಟನೆಯನ್ನು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದ ಬಿಜೆಪಿ ಮಾರನೆಯ ದಿನ (ಫೆ.11) ಘಟನಾ ಸ್ಥಳಕ್ಕೆ ಧಾವಿಸಿತ್ತು. ಪ್ರತಾಪ್ ಸಿಂಹ ಸೇರಿದಂತೆ ಹಲವರು ಉದಯಗಿರಿಗೆ ತೆರಳಿದ್ದರು. ಆದರೆ, ಅವರನ್ನು ತಡೆದ ಪೊಲೀಸರು ಅಲ್ಲಿಂದ ವಾಪಸ್ ಕಳಿಸಿದ್ದರು. ಆದಾಗ್ಯೂ, ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲೇ ಜನರನ್ನು ಗುಂಪುಗೂಡಿಸಿಕೊಂಡಿದ್ದ ಪ್ರತಾಪ್ ಸಿಂಹ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಾಕಾರಿ ಮಾತುಗಳನ್ನಾಡಿದ್ದರು. ಇದೀಗ, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X